Sunday, September 8, 2024

ಏಪ್ರಿಲ್ 1 ರಿಂದ 15ರ ತನಕ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಸಮಗ್ರವಾಗಿ ಜೀರ್ಣೋದ್ದಾರಗೊಳ್ಳುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶ ಪುಣ್ಯ ಉತ್ಸವದ ಕಾರ್ಯಕ್ರಮಗಳು ಏಪ್ರಿಲ್ ತಿಂಗಳ 1 ನೇ ತಾರೀಕಿನಿಂದ 15 ನೇ ತಾರೀಕಿನವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ಬ್ರಹ್ಮ ಕಲಶ ಪುಣ್ಯ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮ ಕಲಶ ಪುಣ್ಯ ಉತ್ಸವ ಸಮಿತಿಯ ಅಧ್ಯಕ್ಷರಾದ ನಾಡೋಜ ಡಾ ಜಿ ಶಂಕರ್ ರವರ ಉಪಸ್ಥಿತಿಯಲ್ಲಿ ಜ್ಯೋತಿಷಿ ಮಾಧವನ್ ಪೊದುವಾಳರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದ ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಉಪಾಧ್ಯಕ್ಷರಾದ ಸುಭಾಸ್ಚಂದ್ರ ಕಾಂಚನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗುಂಡು ಬಿ ಅಮೀನ್, ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷರಾದ ವಾಸುದೇವ ಸಾಲ್ಯಾನ್, ಭುವನೇಂದ್ರ ಕಿದಿಯೂರ್, ಕ್ಷೇತ್ರದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ, ಮಲ್ಪೆ ಮೀನುಗಾರರ ಸಂಘದ ದ ಅಧ್ಯಕ್ಷರಾದ ದಯಾನಂದ ಸುವರ್ಣ, ಮೋಹನ್ ಬೆಂಗ್ರೆ, ಶ್ರೀಮತಿ ಅಪ್ಪಿ ಎಸ್ ಸಾಲ್ಯಾನ್, ಸರಳಾ ಕಾಂಚನ್ ಮತ್ತಿರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!