Sunday, September 8, 2024

ಮೂಡುಬಗೆ: ವಾಗ್ಜ್ಯೋತಿಯಲ್ಲಿ ವಿಶ್ವ ಶ್ರವಣ ದಿನಾಚರಣೆ

ಕುಂದಾಪುರ: ಮೂಡುಬಗೆಯಲ್ಲಿರುವ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ವಿಶ್ವ ಶ್ರವಣ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನಾ ಕಾರ್ಯಕ್ರಮ ಉದ್ಘಾಟಿಸಿದರು. ಮಣಿಪಾಲ ಮಾಹೆ ವಾಕ್ ಶ್ರವಣ ವಿಭಾಗದ ಡಾ.ಅರ್ಚನಾ ಜಿ. ಡಾ.ಭಾರ್ಗವಿ, ಡಾ.ರಾಕೇಶ್ ಮತ್ತು ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರದ ನೊಡೆಲ್ ಅಧಿಕಾರಿ ಜಯಶ್ರೀ, ಪಾಲಕರ ಸಂಘದ ಅಧ್ಯಕ್ಷೆ ಪ್ರೇಮಾ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರವೀಂದ್ರ ಹೆಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಶೈಲಾ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ರಾಜೇಶ್ವರಿ ಬಹುಮಾನ ವಾಚಿಸಿದರು. ಶಿಕ್ಷಕಿ ಪ್ರಮೀಳಾ ಸ್ವಾಗತ ನೃತ್ಯ ನಡೆಸಿಕೊಟ್ಟರು. ಶಿಕ್ಷಕ ಸತ್ಯಪ್ರಸನ್ನ ವಂದಿಸಿದರು. ಆಡಳಿತಾಧಿಕಾರಿ ತ್ರಿವೇಣಿ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಕಿವಿಯ ತಪಾಸಣೆ, ಶ್ರವಣಯಂತ್ರ ವಿತರಣೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!