Sunday, September 8, 2024

ಮೊಗವೀರ ಮಹಾಜನ ಸೇವಾ ಸಂಘದಿಂದ ಪ್ರಶಾಂತ ಆಚಾರ್ಯ ಅವರಿಗೆ ಅಭಿನಂದನೆ

ಕುಂದಾಪುರ : ಮಿನಿಯೇಚರ್ ಬಸ್ ನಿರ್ಮಾತೃ ಪ್ರಶಾಂತ ಆಚಾರ್ಯ ಅವರನ್ನು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ವತಿಯಿಂದ ಅಭಿನಂದಿಸಲಾಯಿತು.

ಬೈಂದೂರು ಶೈಕ್ಷಣಿಕ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2, ಬಗ್ವಾಡಿ ಇಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ವಿನೂತನ ಮಾದರಿ ಸ್ಮಾರ್ಟ್ ತರಗತಿ ಉದ್ಘಾಟನೆ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಂ.ಎಂ.ಸುವರ್ಣ, ಯುವ ಸಂಘಟನೆ ಅಧ್ಯಕ್ಷ ಲೋಹಿತಾಶ್ವ ಆರ್.ಕುಂದರ್, ಸಂಘದ ಪದಾಧಿಕಾರಿಗಳು, ಸ್ಮಾರ್ಟ್ ತರಗತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!