Sunday, September 8, 2024

ಬಗ್ವಾಡಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ


ಕುಂದಾಪುರ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವದ ಪ್ರಯುಕ್ತ ಹೊರೆ ಕಾಣಿಕೆ ಸಮರ್ಪಣೆ ಏ.1ರಂದು ನಡೆಯಿತು
ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮೊಗವೀರ ಯುವ ಸಂಘಟನೆಗಳ ಕೂಡುವಿಕೆಯಿಂದ ಬಗ್ವಾಡಿ ದೇವಸ್ಥಾನದಿಂದ ಸುಮಾರು 208ಕ್ಕೂ ಹೆಚ್ಚು ವಾಹನಗಳಲ್ಲಿ ಹೊರೆಕಾಣಿಕೆ ಮೆರವಣಿಗೆ ಉಚ್ಚಿಲದತ್ತ ಸಾಗಿತು.

ಬೆಳಿಗ್ಗೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನ ಎದುರು ಬೃಹತ್ ಸಂಖ್ಯೆಯಲ್ಲಿ ಹೊರೆಕಾಣಿಕೆ ವಾಹನಗಳು ಬಂದು ಸೇರಿದವು. ಬಳಿಕ ಸರದಿಯ ಪ್ರಕಾರ ಹೊರೆಕಾಣಿಕೆಯ ಭವ್ಯ ಮೆರವಣಿಗೆ ಉಚ್ಚಿಲಕ್ಕೆ ಪ್ರಯಣಿಸಿತ್ತು. ಮೆರವಣಿಗೆಯಲ್ಲಿ ಚಂಡೆವಾದನ, ವಿವಿಧ ಸ್ತಬ್ದ ಚಿತ್ರಗಳು ಇದ್ದವು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಯುವ ಸಂಘಟನೆ ಅಧ್ಯಕ್ಷರು ಪದಾಧಿಕಾರಿಗಳು, ಮೊಗವೀರ ಸ್ತ್ರೀಶಕ್ತಿಯ ಪದಾಧಿಕಾರಿಗಳು, ಸಮಾಜ ಮುಖಂಡರು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!