spot_img
Sunday, March 29, 2026
spot_img

ಕುಂದಾಪುರ ಆಯುರ್ವೇದ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಆಚರಣೆ

ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ದ್ರವ್ಯಗುಣ ವಿಜ್ಞಾನ ವಿಭಾಗ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ವತಿಯಿಂದ ಕೋಟೇಶ್ವರದಲ್ಲಿ ಅಂತರಾಷ್ಟ್ರೀಯ ಭೂಮಿ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನಕುಮಾರ್ ಐತಾಳ್, ಹೆತ್ತವ್ವ ನಮ್ಮ ತಾಯಿಯಾದರೆ ಭೂಮಿ ಕೂಡ ನಮ್ಮ ತಾಯಿಗೆ ಸಮಾನ ಭೂತಾಯಿ ನಮ್ಮೆಲ್ಲ ಆಗುಹೋಗುಗಳನ್ನು ತಾಯಿಯಂತೆ ಸಹಿಸುತ್ತಾಳೆ ಹಾಗಾಗಿ ಭೂಮಿಯನ್ನು ರಕ್ಷಿಸುವ ಹೊಣೆಗಾರಿಕೆ ಭೂತಾಯ ಮಕ್ಕಳಾದ ನಮ್ಮೆಲ್ಲ ಕರ್ತವ್ಯ ಮುಂದಿನ ಪೀಳಿಗೆಗೆ ಸುರಕ್ಷಿತ ಭೂಮಿ ಉಳಿಸುವುದು ನಮ್ಮ ಜವಾಬ್ದಾರಿ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಅಧ್ಯಕ್ಷೆ ಸರಸ್ವತಿ ಗಣೇಶ ಪುತ್ರನ್ ಮಾತನಾಡಿ, ಪ್ರಸ್ತುತ ವರ್ಷದಲ್ಲಿ ಭೂಮಿಯ ಮೇಲಿರುವ ಮಣ್ಣಿನ ಪದರ ಅನೇಕ ಕಾರಣಗಳಿಂದ ಸವಕಳಿಯಾಗಿ ಜೀವಸಂಕುಲಕ್ಕೆ ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ಮಣ್ಣಿನ ಸವಕಳಿ ಆಗದಂತೆ ತಡೆಯಲು ಜಾಗೃತಿಯನ್ನು ಅನುಸರಿಸಬೇಕಾದ ಅಗತ್ಯ ಇದೆ ಈ ನಿಟ್ಟಿನಲ್ಲಿ ಭೂಮಿಯ ಮಣ್ಣನ್ನು ಹಿಡಿದಿಟ್ಟುಕೊಳ್ಳುವಂತ ಗಿಡಮರಗಳನ್ನು ಹೆಚ್ಚು ಹೆಚ್ಚು ಬೆಳೆಸಿ ಸಂರಕ್ಷಿಸುವ ಅಗತ್ಯ ಇದೆ ಅಲ್ಲದೆ ಪ್ಲಾಸ್ಟಿಕ್ ಸೇರಿದಂತೆ ಪರಿಸರಕ್ಕೆ ಹಾನಿಯಾಗುತ ವಸ್ತುಗಳನ್ನು ಉಪಯೋಗದಲ್ಲಿ ಇತಿಮಿತಿಗಳೊಳಿಸಿ ಪರಿಸರ ರಕ್ಷಣೆ ಮಾಡುವಂತದ್ದು ನಾಗರಿಕ ಸಮಾಜದ್ದು ಎಂದರು.

ವೇದಿಕೆಯಲ್ಲಿ ದ್ರವ್ಯಗುಣ ವಿಭಾಗದ ಮುಖ್ಯಸ್ಥರಾಗದ ಡಾ.ಹರಿಪ್ರಸಾದ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕಿ ಡಾ.ಸವಿತಾ ಭಟ್, ಉಪ ವೈದ್ಯಕೀಯ ಅಧೀಕ್ಷಕಿ ಡಾ.ವಾಣಿಶ್ರೀ ಐತಾಳ್, ಡಾ.ನಿಶಾ ಕುಮಾರಿ, ಡಾ.ಶ್ರೀನಿವಾಸ್ ರಾವ್, ಡಾ.ಪ್ರಾಣೇಶ್ ವರ್ಣ, ಡಾ.ಅಕ್ಷತಾ, ಡಾ.ಶ್ರೀರಾಮ್,ಡಾ.ರಾಜೇಶ್ ಚಂದ್ರ,ಡಾ.ಅರ್ಚನಾ ಪಾಣಿಕರ್,ಲಯನ್ಸ್ ಸದಸ್ಯರಾದ ಆಶಾಲತಾ ಶೆಟ್ಟಿ, ಕಲ್ಷನಾ ಭಾಸ್ಕರ್, ಚಂದ್ರಿಕಾ ಧನ್ಯ, ರೈಲ್ವೆ ಪ್ರಯಾಣಿಕರ ಹಿತ ರಕ್ಷಣಾ ಸಮಿತಿ ಕುಂದಾಪುರದ ಅಧ್ಯಕ್ಷ ಗಣೇಶ್ ಪುತ್ರನ್ ಉಪಸ್ಥಿತರಿದ್ದರು.

ಕಾರ್ತಿಕ್ ಪ್ರಾಥಿಸಿದರು. ಡಾ.ವೀಣಾ ಕುಮಾರಿ ಸ್ವಾಗತಿಸಿದರು. ಡಾ.ರಾಘವೇಂದ್ರ ಎಲ್ ಪಿ ವಂದಿಸಿದರು. ಡಾ.ಪ್ರತೀಕ್ಷಿತಾ ನಾವುಡ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!