Sunday, September 8, 2024

ಎ.ಜಿ ಕೊಡ್ಗಿ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕಂಬನಿ

ಕುಂದಾಪುರ: ಮಾಜಿ ಶಾಸಕರಾದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಎ ಜಿ ಕೊಡ್ಗಿ ಕ್ರಾಂತಿಕಾರಿ ಕೃಷಿಕರಾಗಿದ್ದರು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಅವರು 2 ಬಾರಿ ಶಾಸಕರಾಗಿದ್ದರು. ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿ, ಉಡುಪಿ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು.
ಅವರ ನೇತೃತ್ವದಲ್ಲಿ ಅಮಾಸೆಬೈಲು ಕರ್ನಾಟಕದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಪಂಚಾಯಿತಿಯಾಗಿದೆ. ಈ ಯೋಜನೆಯ ಹಿಂದಿನ ಮೆದುಳು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎ ಜಿ ಕೊಡ್ಗಿ ಅವರು ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾಗ ತಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಸೋಲಾರ್ ದೀಪಗಳನ್ನು ಒದಗಿಸುವ ಯೋಜನೆಯನ್ನು ರೂಪಿಸಿದ್ದವರು.

ಎ ಜಿ ಕೊಡ್ಗಿ ಅವರ ಊರಿನ ಹಾಗೂ ಜನಪರ ಕಾಳಜಿವುಳ್ಳ ಆದರ್ಶ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!