Sunday, September 8, 2024

ಎ.ಜಿ ಕೊಡ್ಗಿ ನಿಧನಕ್ಕೆ ಸಚಿವ ಎಸ್. ಅಂಗಾರ ಸಂತಾಪ

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ನಿಧನಕ್ಕೆ ಸಚಿವ ಎಸ್.ಅಂಗಾರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎ ಜಿ ಕೊಡ್ಗಿ ಕ್ರಾಂತಿಕಾರಿ ಕೃಷಿಕರಾಗಿದ್ದರು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಅವರು 2 ಬಾರಿ ಶಾಸಕರಾಗಿದ್ದರು. ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿ, ಉಡುಪಿ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು.

ಅವರ ನೇತೃತ್ವದಲ್ಲಿ ಅಮಾಸೆಬೈಲು ಕರ್ನಾಟಕದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಪಂಚಾಯಿತಿಯಾಗಿದೆ. ಈ ಯೋಜನೆಯ ರೂವಾರಿ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎ ಜಿ ಕೊಡ್ಗಿ ಅವರು ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾಗ ತಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಸೋಲಾರ್ ದೀಪಗಳನ್ನು ಒದಗಿಸುವ ಯೋಜನೆಯನ್ನು ರೂಪಿಸಿದ್ದವರು ಎಂದು ಅವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!