Sunday, September 8, 2024

ಕೊಲ್ಲೂರು ಪ್ರಾಥಮಿಕ ಶಾಲೆಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

ಕೊಲ್ಲೂರು: ಧರ್ಮಪೀಠ ಕೊಲ್ಲೂರು ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲೂರು ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮ ಸೋಮವಾರ ಶಾಲಾ ಸಭಾಂಗಣದಲ್ಲಿ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಅಡಿಗ ವಹಿಸಿ ಶುಭ ಹಾರೈಸಿದರು.

ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ದೀಪದಂತೆ ಬೆಳಗಿ ಎಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಧರ್ಮಪೀಠದ ಅಧ್ಯಕ್ಷರಾದ ಶಶಿಸ್ವಾಮಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್, ಮಾಜಿ ತಾಲೂಕು ಪಂಚಾಯತ್ ಸದಸ್ಯರುಗಳಾದ ಕೆ ರಮೇಶ್ ಗಾಣಿಗ, ಗ್ರೀಷ್ಮಾ ಗಿರಿಧರ್ ಭಿಡೆ ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಗೋವಿಂದ ಜೆ , ಯೋಗೇಶ್ ಭಟ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕರಾದ ಪೂಜಾ ಮತ್ತು ಶಾರದಾ ಸಹಕರಿಸಿದರು. ಶಾಲೆಗೆ ಅಗತ್ಯ ಇರುವ ಬೇಡಿಕೆಯ ಪಟ್ಟಿಯನ್ನು ಶಾಲಾ ಶಿಕ್ಷಕ ವಾಸು ವಾಚಿಸಿದರು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶಾರದಾ ಸ್ವಾಗತಿಸಿದರು, ಶಿಕ್ಷಕಿ ಶೈಲಜಾ ನಿರೂಪಿಸಿದರು, ಶಿಕ್ಷಕಿ ನಿರ್ಮಲಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!