spot_img
Wednesday, April 1, 2026
spot_img

ಶಾಲಾ ಸಂಸತ್ತಿಗಾಗಿ ಮತದಾನ :ಇವಿ‌ಎಂ ಮೂಲಕ ಮತ ಚಲಾಯಿಸಿದ ಸಿದ್ಧಾಪುರ ಪ್ರೌಢಶಾಲೆ ವಿದ್ಯಾರ್ಥಿಗಳು!

ಪ್ರಜಾಪ್ರಭುತ್ವದ ಪಾಠ ಹೇಳುವ ಶಾಲಾ ಚುನಾವಣೆ

ಸಿದ್ಧಾಪುರ: ಸಿದ್ಧಾಪುರದ ಸರ್ಕಾರಿ ಪ್ರೌಢಶಾಲೆಯು ಅತ್ಯಂತ ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆ. ಈ ಶಾಲೆಯ 642 ಮಕ್ಕಳಲ್ಲಿ 611 ವಿದ್ಯಾರ್ಥಿಗಳು ಇಂದು ಶಾಲಾ ಸಂಸತ್ತಿಗಾಗಿ ನಡೆದ ಮಾದರಿ ಮತದಾನದಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಮೊದಲ ಪಾಠ ಪಡೆದರು.

ಶಾಲಾ ಸಂಸತ್ತು ಪ್ರಜಾಪ್ರಭುತ್ವದ ಆಚರಣೆಯ ಜೊತೆ ಪ್ರಜಾಪ್ರಭುತ್ವದ ಮೌಲ್ಯ ಮತ್ತು ಸಂಸ್ಕಾರವನ್ನು ಮಕ್ಕಳಿಗೆ ಎಳವೆಯಲ್ಲೇ ತಿಳಿಸುತ್ತವೆ. ಭಿನ್ನಾಭಿಪ್ರಾಯವನ್ನು ಗೌರವಿಸುವುದು, ಬಹುಮತದ ತೀರ್ಮಾನಕ್ಕೆ ಬದ್ಧರಾಗುವುದು, ಅಧಿಕಾರವನ್ನು ಪ್ರಶ್ನಿಸುವುದು, ಸಂವಿಧಾನದಲ್ಲಿ ನಂಬಿಕೆಯಿಡುವುದು ಇತ್ಯಾದಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ರೂಪಿಸುತ್ತವೆ. ನಾಯಕತ್ವದ ಗುಣಗಳನ್ನು ಅಭಿವೃದ್ಧಿಪಡಿಸುವಲ್ಲಿ ನೆರವಾಗುತ್ತದೆ.

ಇಂದಿನ ವಿದ್ಯಾರ್ಥಿ ಸಂಸತ್ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ಇವಿ‌ಎಂ ಅಪ್ ಮೂಲಕ ೬ ಬೂತ್‌ಗಳಲ್ಲಿ ವಿದ್ಯಾರ್ಥಿಗಳು ಮತ ಚಲಾಯಿಸಿದರು

ಶಾಲಾ ನಾಯಕ ಸ್ಥಾನಕ್ಕೆ ಮೂರು ಅಭ್ಯರ್ಥಿಗಳು, ಉಪನಾಯಕ ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೂರು ಸುತ್ತುಗಳ ಮತ ಎಣಿಕೆಯ ತರುವಾಯ ಅಂತಿಮವಾಗಿ ಭರತ್ ಕುಮಾರ್ ಶಾಲಾ ನಾಯಕನಾಗಿ, ಅಶ್ವಿನ್ ಉಪನಾಯಕನಾಗಿ, ಸ್ಪಂದನಾ ಉಳ್ಳೂರು ಶಾಲಾ ಉಪನಾಯಕಿಯಾಗಿ ಆಯ್ಕೆಗೊಂಡರು.

ಪ್ರಭಾರ ಮುಖ್ಯ ಶಿಕ್ಷಕ ಉದಯ ಗಾಂವಕಾರ ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಶಿಕ್ಷಕ ವೃಂದ ಮತ್ತು ಸಿಬ್ಬಂದಿಗಳು ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಶಿಕ್ಷಕ ನಾಗರಾಜ್ ಶೆಟ್ಟಿ, ಉದಯ್ ಕುಮಾರ್ ಮತಗಳ ಲೆಕ್ಕ ಪ್ರಕ್ರಿಯೆಯನ್ನು ನಡೆಸಿದರು. ಎನ್‌ಎಸ್‌ಎಸ್ ಸ್ವಯಂಸೇವಕರು ಭದ್ರತಾ ಸಿಬ್ಬಂದಿಗಳಾಗಿ ಸಹಕರಿಸಿದರು.

ಮತದಾನ ಪ್ರಕ್ರಿಯೆಯ ಅಧಿಕೃತ ಆದೇಶದ ನಂತರ ಸ್ಪರ್ಧಿಗಳ ನಾಮಪತ್ರ ಸಲ್ಲಿಸುವಿಕೆ, ಹಿಂತೆಗೆದುಕೊಳ್ಳುವಿಕೆ, ಚುನಾವಣಾ ಪ್ರಚಾರ ಇತ್ಯಾದಿ ಚುನಾವಣಾ ಪ್ರಕ್ರಿಯೆಗಳು ಸಹ ಸಾರ್ವತ್ರಿಕ ಚುನಾವಣೆಯ ರೀತಿಯಲ್ಲಿ ನಡೆದಿದ್ದವು.

ಮತ ಎಣಿಕೆಯ ನಂತರ ನಡೆದ ಸಭೆಯಲ್ಲಿ ಗ್ರಾ. ಪಂ. ಅಧ್ಯಕ್ಷರಾದ ಶೇಖರ್ ಕುಲಾಲ್ ವಿಜೇತರಿಗೆ ಅಧಿಕೃತ ಪ್ರಮಾಣ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು. ಗ್ರಾ. ಪಂ. ಸದಸ್ಯರಾದ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು. ರಾಘವೇಂದ್ರ ಚಾತ್ರಮಕ್ಕಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!