Sunday, September 8, 2024

ಆತ್ರಾಡಿ ಸ.ಕಿ.ಪ್ರಾ ಶಾಲೆಯಲ್ಲಿ ಶಿಕ್ಷಕಿಯರಿಗೆ ಬೀಳ್ಕೋಡುಗೆ

ಕುಂದಾಪುರ: ವಂಡ್ಸೆ ಗ್ರಾ.ಪಂ. ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಶಿಕ್ಷಕಿಯರಾದ ಶಾಂತಾ ಹಾಗೂ ಭವಾನಿ ಇವರಿಗೆ ಬೀಳ್ಕೋಡುಗೆ ಕಾರ್ಯಕ್ರಮ ಇತ್ತೀಚೆಗೆ ಆತ್ರಾಡಿ ಶಾಲೆಯಲ್ಲಿ ನಡೆಯಿತು.

ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಕಲ್ಮಡಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಬಾಬಿ, ಶಿಕ್ಷಣ ಸಂಯೋಜಕರಾದ ವಿಶ್ವನಾಥ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಗ್ರಾ.ಪಂ ಸದಸ್ಯೆ ಸುಬ್ಬು, ಮಾತೃಭೂಮಿ ಯುವ ಸಂಘಟನೆಯ ಮಾಜಿ ಅಧ್ಯಕ್ಷರಾದ ಸಂದೇಶ ಶೆಟ್ಟಿ ಅಡಿಕೆಕೊಡ್ಲು, ರಮೇಶ ಪೂಜಾರಿ ಬಳಿಹಿತ್ಲು, ಶಿಕ್ಷಕ ಸತೀಶ ಶೆಟ್ಟಿ, ಅನುಸೂಯ ಗಾಣಿಗ, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

ವರ್ಗಾವಣೆಗೊಂಡಿರುವ ಶಿಕ್ಷಕಿಯರನ್ನು ಸನ್ಮಾನಿಸಿ, ಗೌರವಿಸಲಾಯಿತು. ಶಾಲೆಯಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಶ್ಲಾಘಿಸಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!