Sunday, September 8, 2024

ಬಿಹಾರದ ರಾಜ್ಯ ಸಭಾ ಸದಸ್ಯ ಸಳ್ವಾಡಿ ಅನಿಲ್ ಕುಮಾರ್ ಹೆಗ್ಡೆ ಅವರಿಗೆ ಬಂಟರ ಸಂಘದಿಂದ ಸನ್ಮಾನ

ಕುಂದಾಪುರ: ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ದ.ಕ ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿ ವತಿಯಿಂದ ಬಿಹಾರದ ರಾಜ್ಯ ಸಭೆಗೆ ಆಯ್ಕೆಯಾದ ಕುಂದಾಪುರ ತಾಲೂಕು ಸಳ್ವಾಡಿಯವರಾದ ಅನಿಲ್ ಕುಮಾರ್ ಹೆಗ್ಡೆ ಅವರನ್ನು ಪುರಸ್ಕರಿಸುವ ಕಾರ್ಯಕ್ರಮ ಜೂ.19ರಂದು ನಡೆಯಿತು.

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ದಿ. ರಾಮಕೃಷ್ಣ ಹೆಗಡೆಯವರ ನಿಕಟವರ್ತಿಯಾಗಿದ್ದ ಅನಿಲ್ ಕುಮಾರ್ ಹೆಗ್ಡೆ ಅವರು ನಂತರ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಮಾಜಿ ರಕ್ಷಣಾ ಮಂತ್ರಿಗಳಾಗಿದ್ದ ದಿ. ಜಾರ್ಜ್ ಫೆರ್ನಾಂಡಿಸ್ ಅವರಿಗೆ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಈಗ ಬಿಹಾರ ಮುಖ್ಯಮಂತ್ರಿಗಳಾದ ನಿತೀಶ್ ಕುಮಾರ್ ಅವರ ಆಪ್ತರಾಗಿದ್ದು, ಪ್ರಸ್ತುತ ಬಿಹಾರದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದಾರೆ.

ಅನಿಲ್ ಕುಮಾರ್ ಹೆಗ್ಡೆ ಅವರನ್ನು ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಜೊತೆ ಕಾರ್ಯದರ್ಶಿಗಳಾದ ಸಂಪಿಗೇಡಿ ಸಂಜೀವ ಶೆಟ್ಟಿ ಯವರು ಜಂಟಿಯಾಗಿ ಸನ್ಮಾನಿಸಿದರು.

ಸಂಘದ ತಾಲೂಕು ಸಮಿತಿಯ ಸಹ ಸಂಚಾಲಕರಾದ ವಿಕಾಸ ಹೆಗ್ಡೆ-ಕೋಳ್ಕೆರೆ, ತಾಲೂಕು ಸಮಿತಿ ಸದಸ್ಯರಾದ ಕಾವ್ರಾಡಿ ಸಂಪತ್ ಕುಮಾರ್ ಶೆಟ್ಟಿ, ಚಿತ್ತರಂಜನ್ ಹೆಗ್ಡೆ ಹರ್ಕೂರು, ರೋಹಿತ್ ಕುಮಾರ್ ಶೆಟ್ಟಿ ಬ್ರಹ್ಮಾವರ, ಕೆ ರಮೇಶ ಶೆಟ್ಟಿ, ಕುಂದಾಪುರ ತಾಲೂಕು ಸಂಘದ ಮಾಜಿ ಅಧ್ಯಕ್ಷರಾದ ಬಿ. ಅರುಣ್ ಕುಮಾರ್ ಶೆಟ್ಟಿ, ಅನಿಲ್ ಕುಮಾರ್ ಹೆಗ್ಡೆಯವರ ತಾಯಿ ಕುಂದಾಪುರ ತಾಲೂಕು ಮಹಿಳಾ ಸಂಘದ ಅಧ್ಯಕ್ಷರಾದ ಹೇಮಾವತಿ ಎನ್. ಹೆಗ್ಡೆ, ಭೂ ಅಭಿವೃದ್ದಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕಾಳಾವರ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ ರಂಜಿತ್ ಕುಮಾರ್ ಶೆಟ್ಟಿ-ಕೊರ್ಗಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!