Sunday, September 8, 2024

ಧಾರಾಕಾರ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು-ಹಲವೆಡೆ ನೆರೆಭೀತಿ

ಕುಂದಾಪುರ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿ ಜಿಲ್ಲೆಯ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಜಿಲ್ಲೆಯ ಎಲ್ಲಾ ನದಿಗಳು ಕೂಡಾ ತುಂಬಿ ಹರಿಯುತ್ತಿದೆ. ಕೆಲವೆಡೆ ನೆರೆ ಕಾಣಿಸಿಕೊಂಡಿದೆ. ಚಕ್ರಾ, ಸೌಪರ್ಣಿಕ, ಸುಮನೆ, ಕುಬ್ಜ, ವಾರಾಹಿ ನದಿ ತೀರಗಳಲ್ಲಿ ನೆರೆ ಕಾಣಿಸಿಕೊಂಡಿದೆ.

ನಾವುಂದ ಗ್ರಾಮದ ಸಾಲ್ಬುಡ, ಕುದ್ರು ಪ್ರದೇಶಗಳಲ್ಲಿ ನೆರೆ ಕಾಣಿಸಿಕೊಂಡಿದ್ದು ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ನಾವುಂದ ಕುದ್ರುವಿನಲ್ಲಿ ಯೋಗಿಶ್ ಕಾರಂತರ ಮನೆ ಕುಸಿದು ಬಿದ್ದಿದೆ. ಮರವಂತೆ, ಬಡಾಕೆರೆ ಮೊದಲಾದ ಪ್ರದೇಶಗಳಲ್ಲಿಯೂ ನೆರೆ ಕಾಣಿಸಿಕೊಂಡಿದೆ. ಹಲವಾರು ಕಡೆಗಳಲ್ಲಿ ಮರಗಳು ಉರುಳಿ ಬಿದ್ದಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!