spot_img
Monday, March 23, 2026
spot_img

ಗಂಗೊಳ್ಳಿಯಲ್ಲಿ ರೂ. 100 ಕೋಟಿ ವೆಚ್ಚದ ಕೋಸ್ಟಲ್ ಬರ್ತ್ ನಿರ್ಮಾಣ-ಬಿ.ವೈ.ರಾಘವೇಂದ್ರ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿಯಲ್ಲಿ ಸುಮಾರು ರೂ. 100 ಕೋಟಿ ವೆಚ್ಚದಲ್ಲಿ ಕೋಸ್ಟಲ್ ಬರ್ತ್ ನಿರ್ಮಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ಅವರು ಸಮ್ಮತಿಸಿದ್ದಾರೆ. ಕೋಸ್ಟಲ್ ಬರ್ತ್ ನಿರ್ಮಾಣದಿಂದ ಮತ್ಸೋದ್ಯಮಕ್ಕೆ ಪೂರಕ ವಾತಾವರಣ ಸಿಗಲಿದೆ. ಸಾಗರಮಾಲ ಯೋಜನೆಯಲ್ಲಿ ಬಂದರು ಸಂಪರ್ಕ ಕೂಡ ಆಗಲಿದ್ದು, ಮುಂದಿನ ದಿನಗಳಲ್ಲಿ ಗಂಗೊಳ್ಳಿ ಒಂದು ಅತ್ಯುತ್ತಮ ವಾಣಿಜ್ಯ ಕೇಂದ್ರವಾಗಿ ಹೊರ ಹೊಮ್ಮಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಕೈಗಾರಿಕೋದ್ಯಮಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತ ಇವರ ವತಿಯಿಂದ ಕೈಗಾರಿಕಾ ವಸಾಹತು ನಿರ್ಮಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸ್ಥಳ ಗುರುತು ಮಾಡಲು ವಿನಂತಿಸಲಾಗಿತ್ತು. ಅದರಂತೆ ಸುಮಾರು 19 ಎಕ್ರೆ ಸ್ಥಳವನ್ನು ಗುರುತಿಸಿ ಕೈಗಾರಿಕಾ ವಸಾಹತು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ.
ಇವುಗಳಿಂದ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗ ಸೃಷ್ಠಿಯಾಗಲಿದೆ. ಈ ಯೋಜನೆಗಳಿಗೆ ಸಹಕರಿಸಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸಂಸದ ಬಿ. ವೈ. ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!