Sunday, September 8, 2024

ಬಗ್ವಾಡಿಯಲ್ಲಿ ವಿಜೃಂಭಣೆಯ ಶ್ರೀ ವರಮಹಾಲಕ್ಷ್ಮೀ ಪೂಜೆ

ಕುಂದಾಪುರ, ಆ.5: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ನಡೆಯಿತು. ಸಾಮೂಹಿಕವಾಗಿ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಮಧ್ಯಾಹ್ನ ಅಜಿತ್ ಕುಮಾರ್, ಶ್ರುತ ಎಂಟರ್‌ಪ್ರೈಸಸ್ ಬೆಂಗಳೂರು ಇವರ ಸೇವೆಯಾಗಿ ಅನ್ನಸಂತರ್ಪಣೆ ನಡೆಯಿತು. ಆನೇಕ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಕುಂದಾಪುರ ಶಾಖೆ ಪದಾಧಿಕಾರಿಗಳು, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀಶಕ್ತಿ, ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಇದರ ಕುಂದಾಪುರ, ಹೆಮ್ಮಾಡಿ, ಹಾಲಾಡಿ, ಕೋಟೇಶ್ವರ, ಬೈಂದೂರು ಘಟಕಗಳು, ಭಜನಾ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಗಳಿಂದ ಸರಳವಾಗಿ ನಡೆಯುತ್ತಿದ್ದ ಶ್ರೀ ವರಮಹಾಲಕ್ಷ್ಮೀ ಪೂಜೆಗೆ ಈ ವರ್ಷ ವೈಭವ ಮರುಕಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!