Sunday, September 8, 2024

ಕಂದಾವರ ಅಂಗನವಾಡಿ ಕೇಂದ್ರಕ್ಕೆ ಕೊಡುಗೆಗಳ ಹಸ್ತಾಂತರ

ಕುಂದಾಪುರ: ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾವರ ಅಂಗನವಾಡಿ ಕೇಂದ್ರದಲ್ಲಿ ಜೆಸಿ‌ಐ ಕುಂದಾಪುರ ಸಿಟಿಯ ಪೂರ್ವ ಅಧ್ಯಕ್ಷ ನಾಗೇಶ್ ನಾವಡ ಲಯನ್ಸ್ ಕ್ಲಬ್ ಕುಂದಾಪುರ ಸದಸ್ಯ ಸುರೇಂದ್ರ ಶೆಟ್ಟಿ ಮೂಡ್ಲಕಟ್ಟೆ ಸಮವಸ್ತ್ರವನ್ನು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಂದಾಪುರ ಲೀಜನ್‌ನಿಂದ ಕುಕ್ಕರ್, ದಿನಕರ್ ಶೆಟ್ಟಿ ಕಾಡಿನಕೊಂಡ ದೇವರ ಫೋಟೋ ಹಾಗು ಕುರ್ಚಿ, ನಿರೂಪಮ ಶೆಟ್ಟಿ ಸ್ಟಡಿ ಚೆರನ್ನು ಕೊಡುಗೆಯಾಗಿ ನೀಡಿದರು.
ಕೊಡುಗೆ ಹಾಗು ಹಸ್ತಾಂತರ ಕಾರ್ಯಕ್ರಮ ಕಂದಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಅನುಪಮಾ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಜೆಸಿ‌ಐ ಕುಂದಾಪುರ ಸಿಟಿಯ ಅಧ್ಯಕ್ಷ ಅಭಿಲಾಶ್, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ಲಯನ್ಸ್ ಕ್ಲಬ್ ಕುಂದಾಪುರದ ಸುರೇಂದ್ರ ಶೆಟ್ಟಿ ಮೂಡ್ಲಕಟ್ಟೆ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಂದಾಪುರ ಲೀಜನ್ ಅಧ್ಯಕ್ಷ ವಿಷ್ಣು ಕೆ ಬಿ, ಅಂಗನವಾಡಿ ಮೇಲ್ವಿಚಾರಕಿ ಸುಜಯ , ಗ್ರಾಮ ಪಂಚಾಯತ್ ಸದಸ್ಯೆ ಜ್ಯೋತಿ, ಮಾಜಿ ಸದಸ್ಯರಾದ ಸಂತೋಷ ಪೂಜಾರಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಂಜೀವ ಹಾಗು ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ರತ್ನ ಸ್ವಾಗತಿಸಿದರು. ಇಂದಿರಾ ವಂದಿಸಿದರು. ಮಹಾಬಲೇಶ್ವರ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!