spot_img
Monday, April 13, 2026
spot_img

ವಕ್ವಾಡಿ: ಯುವಶಕ್ತಿ-ನೂತನ ಕಚೇರಿ ಉದ್ಘಾಟನೆ

ಯುವಶಕ್ತಿಯಂತಹ ಸಂಸ್ಥೆ ಊರಿನ ಶಕ್ತಿ ಮಾತ್ರವಲ್ಲ, ದೇಶದ ಶಕ್ತಿ-ಆಶಾಲತಾ ಶೆಟ್ಟಿ

ಕುಂದಾಪುರ (ವಕ್ವಾಡಿ) : ಯುವಶಕ್ತಿ ಮಿತ್ರ ಮಂಡಲ (ರಿ.) ಹೆಗ್ಗಾರ್ ಬೈಲು, ವಕ್ವಾಡಿ ಈ ಊರಿನ ಸಾಕ್ಷಿ ಪ್ರಜ್ಞೆ. ಊರಿನ ಸಮಗ್ರ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಸಂಸ್ಥೆ ಸೂರ್ಯ ಚಂದ್ರರಿರುವ ಕಾಲದವರೆಗೂ ಉಳಿಯಲಿ, ಬೆಳೆಯಲಿ ಎಂದು ಕಾಳಾವರ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಆಶಾಲತಾ ಶೆಟ್ಟಿ ಹೇಳಿದರು.

ಯುವಶಕ್ತಿಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಶಕ್ತಿಯಂತಹ ಸಂಸ್ಥೆ ಪ್ರತಿ ಊರಿಗೂ ಅಗತ್ಯ. ವಕ್ವಾಡಿ ಈ ಮಟ್ಟಿಗೆ ಅಭಿವೃದ್ಧಿ ಕಾಣಬೇಕಾದರೆ ಅದಕ್ಕೆ ಯುವಶಕ್ತಿಯ ಬಹುಪಾಲಿದೆ. ಇಂತಹ ಸಂಘಟನೆ ಒಂದು ಊರಿನ ಶಕ್ತಿ ಮಾತ್ರವಲ್ಲ, ಇದು ದೇಶದ ಶಕ್ತಿ. ದಿನನಿತ್ಯ ಕೋಮು ಗಲಭೆಯಂತಹ ಅಸಹ್ಯ ಬೆಳವಣಿಗೆಗಳ ನಡುವೆ ದೇಶದಲ್ಲಿ ಶಾಂತಿ ಕಾಪಾಡಬೇಕಾದರೇ ಯುವಶಕ್ತಿಯಂತಹ ಚಿಂತನೆಯುಳ್ಳ ಸಂಘ ಸಂಸ್ಥೆಗಳ ಪಾಲು ತುರ್ತಾಗಿ ದೇಶಕ್ಕೆ ಬೇಕಾಗಿದೆ. ಇತ್ತೀಚೆಗಷ್ಟೇ ತನ್ನ ಇಪ್ಪತ್ತೈದನೇ ವಾರ್ಷಿಕೋತ್ಸವ ಪೂರೈಸಿದ ಸಂಸ್ಥೆ ಈ ಊರಿಗೆ ನೂರ್ಕಾಲ ನೆರಳಾಗಿ ಬೆಳೆಯಲಿ ಎಂದು ಅಭಿಪ್ರಾಯ ಪಟ್ಟರು.

ಸಂಸ್ಥೆಯ ಅಧ್ಯಕ್ಷ ಸುಧೀಂದ್ರ ವಕ್ವಾಡಿ ಮಾತನಾಡಿ, ಯುವಶಕ್ತಿ ಅಭಿವೃದ್ಧಿಯನ್ನೇ ತನ್ನ ಉಸಿರಾಗಿಸಿಕೊಂಡಿದ್ದಕ್ಕಾಗಿ ಈವರೆಗೆ ಬೆಳೆಯುವುದಕ್ಕೆ ಸಾಧ್ಯವಾಗಿದೆ. ಶಾಂತಿ ಸಮಾಜದ ದಾರಿದೀಪವಾಗಿ ನಿಲ್ಲುವ ಯುವಶಕ್ತಿಯ ಸಂಕಲ್ಪವನ್ನು ಯಾವುದೇ ಅಘೋಚರ ಶಕ್ತಿಯಿಂದಲೂ ತಡೆಯುವುದಕ್ಕೆ ಸಾಧ್ಯವಿಲ್ಲ. ಸಂಸ್ಥೆಯ ಕಾರ್ಯಗಳುದ್ದಕ್ಕೂ ಜೊತೆಗಿದ್ದ ಕಾಳವಾರ ಗ್ರಾಮ ಪಂಚಾಯತ್ ಗೆ, ಊರಿನ ಸಮಸ್ತ ಜನತೆಗೆ ಸಂಸ್ಥೆ ಅಭಾರಿಯಾಗಿರಲಿದೆ ಎಂದರು.

ಈ ಸಂದರ್ಭದಲ್ಲಿ ಕಾಳವಾರ ಗ್ರಾಮ ಪಂಚಾಯತ್ ನ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ, ಸಂಸ್ಥೆಯ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

ಇನ್ನು, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯುವಶಕ್ತಿ ಮಿತ್ರ ಮಂಡಲ (ರಿ.) ಹೆಗ್ಗಾರ್ ಬೈಲು ವಕ್ವಾಡಿ, ಇತ್ತೀಚೆಗಷ್ಟೇ ತನ್ನ ರಜತ ಸಂಭ್ರಮವನ್ನು ಆಚರಿಸಿಕೊಂಡಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!