Sunday, September 8, 2024

ಸೇತುವೆಯಿಂದ ನದಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಮೃತದೇಹ ಪತ್ತೆ

ಕುಂದಾಪುರ: ಸಂಗಮ್ ಸಮೀಪ ವಾರಾಹಿ ನದಿಯ ಸೇತುವೆ ಬದಿಯಲ್ಲಿ ಸೈಕಲ್ ನಿಲ್ಲಿಸಿ, ಮೊಬೈಲ್ ಇಟ್ಟು ನದಿಗೆ ವಿದ್ಯಾರ್ಥಿಯೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದ್ದು, ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದದ ಕಡಲ ತೀರದಲ್ಲಿ ಪತ್ತೆಯಾಗಿದೆ.

ನದಿಗೆ ಹಾರಿರುವ ವ್ಯಕ್ತಿ ವಿದ್ಯಾರ್ಥಿಯಾಗಿದ್ದು ಕುಂದಾಪುರದ ವಡೇರಹೋಬಳಿ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದೆನೆಂದು ಬೇಸರಗೊಂಡ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ.

ಹೆಬ್ರಿಯ ನವೋದಯದಲ್ಲಿ 10ನೇ ತರಗತಿ ತನಕ ವ್ಯಾಸಂಗ ಮಾಡಿ, ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ಮುಗಿಸಿದ್ದ. ವೈದ್ಯಕೀಯ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ನೀಟ್ ಪರೀಕ್ಷೆ ಬರೆದಿದ್ದ ಎನ್ನಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!