spot_img
Sunday, April 12, 2026
spot_img

ಬನ್ನಂಜೆ ಸಂಜೀವ ಸುವರ್ಣರಿಗೆ ಗೆಳೆಯರ ಬಳಗದ ಕಾರಂತ ಪುರಸ್ಕಾರ

ಕೋಟ: ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ಗೆಳೆಯರ ಬಳಗ-ಕಾರಂತ ಪುರಸ್ಕಾರಕ್ಕೆ ಈ ಬಾರಿ ಕಾರಂತರ ಒಡನಾಡಿ, ಯಕ್ಷಗಾನ ಕಲಾವಿದ, ಹಾಗೂ ಗುರು, ಸಾಹಿತಿ ನಾಡು-ನುಡಿ ಏಳಿಗೆಗಾಗಿ ಅನನ್ಯವಾಗಿ ತೊಡಗಿಸಿಕೊಂಡಿರುವ ಹಾಗೂ ಕಾರಂತರ ನಿಷ್ಟಾವಂತ ಅಭಿಮಾನಿಯಾಗಿರುವ ಬನ್ನಂಜೆ ಸಂಜೀವ ಸುವರ್ಣ ಇವರು ಭಾಜನರಾಗಿದ್ದಾರೆ.

ಮೂಲ ಬನ್ನಂಜೆಯವರಾದ ಇವರು ಯಕ್ಷಗಾನ ಕಲೆಯ ಅನೇಕ ಆಯಾಮಗಳನ್ನು ಡಾ ಕಾರಂತರೇ ಮೊದಲಾದ 21 ಕಲಾ ಗುರುಗಳಿಂದ ಕಲಿತು, ಪರಿಣಿತರಾಗಿ, ಗುರುವಾಗಿ ಬೆಳೆದು ದೇಶ ವಿದೇಶಗಳಲ್ಲಿ 5000 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ತರಬೇತು ನೀಡಿದ ಅಮೋಘ ಸಾಧಕರು ಇವರಾಗಿದ್ದಾರೆ. ಯಕ್ಷಗಾನವಲ್ಲದೇ, ಭರತನಾಟ್ಯ, ಕೋಡಿಯಾಟ್ಟಂ, ಕಥಕ್ , ನಾಟಕ ಕಲೆಯಲ್ಲೂ ಪರಿಣತಿ ಪಡೆದವರಾಗಿದ್ದಾರೆ. ಡಾ ಕೋಟ ಶಿವರಾಮ ಕಾರಂತರ ನಂತರ ಇವರ ನಿರ್ದೇಶನದಲ್ಲಿ ಯಕ್ಷಗಾನ ಬ್ಯಾಲೆ ದೇಶ ವಿದೇಶಕ್ಕೆ ಕೊಂಡೊಯ್ದು, ಪ್ರದರ್ಶನ ನೀಡಿ ಖ್ಯಾತಿ ಗಳಿಸಿದ ಹೆಗ್ಗಳಿಕೆ ಇವರದ್ದು.

ಗೆಳೆಯರ ಬಳಗ ಕಾರಂತ ಪುರಸ್ಕಾರ-2022 ನ್ನು ಅಕ್ಟೋಬರ್ ತಿಂಗಳ 15 ರ ಶನಿವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಹಾಗೂ ಅತಿಥಿ ಅಭ್ಯಾಗತರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!