Sunday, September 8, 2024

ಸಮಾಜ ಸೇವಕ ರವಿ ಕಟಪಾಡಿ ಅವರಿಗೆ ‘ಶ್ರೀ ವಿನಾಯಕ ಸಾಧನ ಶ್ರೀ’ ಪುರಸ್ಕಾರ

ಕೋಟ : ಶ್ರೀವಿನಾಯಕ ಯುವಕ ಮಂಡಲ (ರಿ) ಸಾಬ್ರಕಟ್ಟೆ-ಯಡ್ತಾಡಿ ಅವರು ಕೊಡಮಾಡುವ 2022ನೇ ಸಾಲಿನ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರವನ್ನು ಕೃಷ್ಣ ಜನ್ಮಾಷ್ಟಮಿಯಂದು ವೈವಿಧ್ಯಮಯ ವೇಷ ತೊಟ್ಟು ಸಂಗ್ರಹವಾದ ಹಣದಿಂದ ಅನಾರೋಗ್ಯ ಪೀಡಿತ ಮಕ್ಕಳ ವೈದ್ಯಕೀಯ ನೆರವು ನೀಡುವುದರ ಜೊತೆಗೆ ಹಲವಾರು ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ನಿಸ್ವಾರ್ಥ ಸಮಾಜ ಸೇವಕ ಶ್ರೀ ರವಿ ಕಟಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 2 ರಂದು ಸಾಬ್ರಕಟ್ಟೆಯ ಮಹಾತ್ಮ ಗಾಂಧಿ ಫ್ರೌಡಶಾಲೆಯಲ್ಲಿ ನಡೆಯುವ 11 ನೇ ವರ್ಷದ ಶ್ರೀ ಶಾರದ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಪ್ರಭಾಕರ್ ಪೂಜಾರಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!