Sunday, September 8, 2024

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳು ಕುಂದಾಪುರ: ಗಾಂಧೀಜಿ-ಶಾಸ್ತ್ರೀಯವರ ಜನ್ಮ ದಿನಾಚರಣೆ

ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳು, ಕುಂದಾಪುರ ಇಲ್ಲಿ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸ್ಕೌಟ್ಸ್ ತರಬೇತಿ ಅಯುಕ್ತರಾದ ಆನಂದ ಅಡಿಗ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ,ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ , ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯ ಗಾಂಧಿಜಿ ಹಾಗೂ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು.

ಕಬ್ಸ್ ಶಿಕ್ಷಕಿ ಸುನೀತಾ ಸ್ವಾಗತಿಸಿ , ಬುಲ್ ಬುಲ್ ಶಿಕ್ಷಕಿ ಪದ್ಮಾವತಿ ವಂದಿಸಿದರು. ಗೈಡ್ಸ್ ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಸ್ಕೌಟ್ಸ್, ಗೈಡ್ಸ್ ,ಎನ್.ಸಿ.ಸಿ , ಶಾಲಾ ಮಕ್ಕಳು ಹಾಗೂ ಸಂಸ್ಥೆಯ ಭೋದಕ, ಭೋದಕೆತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸರ್ವಧರ್ಮ ಪ್ರಾರ್ಥನೆ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!