Sunday, September 8, 2024

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕುಂದಾಪರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರಭಾಕರ ಶ್ಯಾನುಬಾಗ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ,ರಾಜ್ಯೋತ್ಸವದ ಸಂದೇಶವನ್ನು ನೀಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರಾಗಿಣಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ರೇಷ್ಮಾ ಡಿಸೋಜ , ಪೂರ್ವ ಪ್ರಾಥಮಿಕ ಶಾಲಾ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೈದರು.

ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿಯವರು ಸರ್ವರನ್ನು ಸ್ವಾಗತಿಸಿದರು. ವಿದ್ಯಾರ್ಥಿಗಳಾದ ರಂಜನ್ ಎಸ್.ಪಿ, ಯುಕ್ತಾ ಹೊಳ್ಳ ಮತ್ತು ಆದ್ವಿಯವರು ರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ಶಾಲಾ ವಿದ್ಯಾರ್ಥಿನಿಯರು ಕನ್ನಡ ಹಾಡುಗಳನ್ನು ಹಾಡಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಪೂರ್ವ ಪ್ರಾಥಮಿಕ ಶಿಕ್ಷಕಿ ಸಂದ್ಯಾ ಧನ್ಯವಾದ ಸಮರ್ಪಣೆ ಗೈದರು. ಈ ಸಮಾರಂಭದಲ್ಲಿ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ,ಎನ್.ಸಿ.ಸಿ ಸ್ಕೌಟ್ಸ್, ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!