spot_img
Tuesday, April 14, 2026
spot_img

ಕಲಿಕೆಯ ಜತೆಗೆ ಕೌಶಲ್ಯ ಮಹತ್ವದ್ದು- ಡಾ. ಸಿ‌ಎ. ಎ ರಾಘವೇಂದ್ರ ರಾವ್

‘ಸ್ಕಿಲ್ ಅಪ್ ವಿಥ್ ಬಡೆಕ್ಕಿಲ ಪ್ರದೀಪ್’ ನಿರೂಪಣೆ, ಸಂವಹನ ಹಾಗೂ ವಾಯ್ಸ್ ಓವರ್ ಕಾರ್ಯಾಗಾರದ ಸಮಾರೋಪ

ಮಂಗಳೂರು : ವಿದ್ಯಾರ್ಥಿಗಳಿಗೆ ಕಲಿಲೆಯ ಜತೆಗೆ ಕೌಶಲ್ಯ ಮಹತ್ವವಾದದ್ದು. ವ್ಯಕ್ತಿಯೊಬ್ಬನ ಸಂಪೂರ್ಣ ವಿಕಾಸಾಭಿವೃದ್ಧಿಗೆ ಕೌಶಲ್ಯಗಳ ಅನುಷ್ಠಾನ ಮುಖ್ಯ ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಸಿ‌ಎ ಎ ರಾಘವೇಂದ್ರ ರಾವ್ ಅಭಿಪ್ರಾಯ ಪಟ್ಟರು.

ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ & ಹ್ಯೂಮ್ಯಾನಿಟಿಸ್ ನ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ ಆಯೋಜಿಸಿದ ‘ಸ್ಕಿಲ್ ಅಪ್ ವಿಥ್ ಬಡೆಕ್ಕಿಲ ಪ್ರದೀಪ್’ ಒಂದು ದಿನದ ನಿರೂಪಣೆ, ಸಂವಹನ ಹಾಗೂ ವಾಯ್ಸ್ ಓವರ್ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚತುರತೆ ಈ ವೇಗದ ಜಗತ್ತಿಗೆ, ಶಿಕ್ಷಣಕ್ಕೆ, ಕಲಿಕೆಗೆ ಮುಖ್ಯ. ಅದು ಬಡೆಕ್ಕಿಲ ಪ್ರದೀಪ್ ರಂತಹ ಪ್ರತಿಭಾನ್ವಿತ ಸಂಪನ್ಮೂಲಗಳಿಂದ ವಿದ್ಯಾರ್ಥಿಗಳಿಗೆ, ಇಂದಿನ ಯುವ ಜನತೆಗೆ ಇನ್ನೂ ಹೆಚ್ಚಿನ ಮಟ್ಟಿಗೆ ದೊರೆಯುವಂತಾಗಲಿ ಎಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಪಿ ಎಸ್ ಐತಾಳ್, ಬಿಗ್ ಬಾಸ್ ಕನ್ನಡ, ಮೆಟ್ರೋ ಧ್ವನಿ ಖ್ಯಾತಿಯ ಬಡೆಕ್ಕಿಲ ಪ್ರದೀಪ್, ಡೀನ್ ಡಾ. ಲವೀನ ಡಿಮೆಲ್ಲೋ, ಕಾರ್ಯಕ್ರಮದ ಸಂಯೋಜಕ ಪ್ರೊಫೆಸರ್ ಶ್ರೀರಾಜ್ ಎಸ್. ಆಚಾರ್ಯ, ಡಾ. ವಿದ್ಯಾ ಎನ್, ಪ್ರೊ. ಸುಶ್ಮಿತಾ ಕೋಟ್ಯಾನ್, ಪ್ರೊ. ಜಾಯ್ಸನ್ ಕಾರ್ಡೋಜಾ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!