Sunday, September 8, 2024

ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ

ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88ವ) ನ.30ರ ಮುಂಜಾನೆ ನಿಧನರಾದರು.

ಯಕ್ಷಗಾನ ಕಲಾವಿದರಾಗಿ, ಅರ್ಥಧಾರಿಯಾಗಿ ಆಟ-ಕೂಟಗಳಲ್ಲಿ ಜನಪ್ರಿಯತೆ ಗಳಿಸಿದ್ದರು. ಧರ್ಮಸ್ಥಳ ಮೇಳದಲ್ಲಿ ಅವರು ನಿರ್ವಹಿಸಿದ ಪಾತ್ರಗಳು ಜನಮಾನಸದಲಿ ಅಚ್ಚೊತ್ತಿ ನಿಂತಿದೆ.

ಕೇರಳದ ಕುಂಬಳೆಯಲ್ಲಿ ಜನಿಸಿದ ಅವರು ಸುರತ್ಕಲ್, ಇರಾ, ಧರ್ಮಸ್ಥಳ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಇವರು 1994ರಲ್ಲಿ ಅವರು ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!