spot_img
Friday, April 17, 2026
spot_img

ವಾರಾಹಿ ಕಾಲುವೆಗೆ ತಕ್ಷಣ ನೀರು ಹಾಯಿಸುವಂತೆ ಹರಿಪ್ರಸಾದ್ ಶೆಟ್ಟಿ ಆಗ್ರಹ

ಕುಂದಾಪುರ: ಈ ಹಿಂದೆ ನೀಡಿದ ಭರವಸೆಯಂತೆ ಡಿಸೆಂಬರ್ 1 ಕ್ಕೆ ವಾರಾಹಿ ಕಾಲುವೆಗೆ ನೀರು ಹಾಯಿಸಬೇಕಾಗಿದ್ದು, ಈ ತನಕ ನೀರು ಹಾಯಿಸಿಲ್ಲ. ನೀರು ಹಾಯಿಸುವ ದಿನಾಂಕದ ಬಗ್ಗೆ ರೈತರಿಗೆ ಮಾಹಿತಿ ನೀಡಿಲ್ಲ. ಕೂಡಲೇ ವಾರಾಹಿ ಕಾಲುವೆಗೆ ನೀರು ಹಾಯಿಸಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆಗ್ರಹಿಸಿದ್ಧಾರೆ.

ರೈತರ 2ನೇ ಭತ್ತದ ಬೆಳೆಗೆ ಡಿಸೆಂಬರ್ ಮೊದಲ ವಾರದಲ್ಲಿ ನೀರಿನ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಪ್ರತಿ ವರ್ಷ ಡಿಸೆಂಬರ 1 ನೇ ತಾರೀಕಿಗೆ ನೀರು ಹಾಯಿಸುವುದೆಂದು ಸಚಿವರ, ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ಉಡುಪಿ ಜಿಲ್ಲಾ ರೈತ ಸಂಘಕ್ಕೆ ಮತ್ತು ರೈತರಿಗೆ ಬರವಸೆ ನೀಡಿದ್ದರು. ಪ್ರತಿ ವರ್ಷ ಮುಗ್ದ ರೈತರು ಕಾಡಿ ಬೇಡಿ ನೀರು ಪಡೆಯುವ ಪರಿಸ್ಥಿತಿ ಎದುರಾಗಿರುವುದು ನೋವಿನ ಸಂಗತಿ.

ಪ್ರತಿ ವರ್ಷ ಮಳೆಗಾಲದಲ್ಲಿ ಕಾಲುವೆಗೆ ಹಾನಿಯಾಗುವುದು ಸಾಮಾನ್ಯ ವಿಚಾರ. ಇದನ್ನು ಸಕಾಲದಲ್ಲಿ ದುರಸ್ಥಿಪಡಿಸುವುದು ಇಲಾಖೆಯ ಜವಬ್ದಾರಿ.

ವಾರಾಹಿ ಎಡದಂಡೆ ನಾಲೆಯ ನೀರು ಸಿಗುವ ರೈತರು ವಾರಾಹಿ ನಾಲೆಯ ನೀರನ್ನು ನಂಬಿ ಸಾವಿರಾರು ಎಕ್ರೆ ಅಡಿಕೆ ತೋಟ ಮಾಡಿದ್ದಾರೆ. ನಾಲೆಯ ದುರಸ್ಥಿ ನೆಪದಲ್ಲಿ ನೀರು ಹಾಯಿಸದಿದ್ದಲ್ಲಿ ಅಡಿಕೆ ತೋಟಗಳಿಗೆ ಡಿಸೆಂಬರ ತಿಂಗಳಲ್ಲೇ ನೀರಿನ ಕೊರತೆಯಾಗಲಿದೆ.

ಯಾವುದೇ ಸುಳ್ಳು ಕಾರಣ ನೀಡದೆ ಕೂಡಲೇ ವಾರಾಹಿ ಕಾಲುವೆಗೆ ನೀರು ಹಾಯಿಸಬೇಕು ಮತ್ತು ನೀರು ಹಾಯಿಸುವ ದಿನಾಂಕದ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!