Sunday, September 8, 2024

ಶಿಕ್ಷಕ ವಿಠಲ್ ಕಾಮತ್ ಅವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಕುಂದಾಪುರ : ಕರ್ನಾಟಕ ಜ್ಞಾನವಿಜ್ಞಾನ ಸಮಿತಿ, ಜನಸ್ನೇಹಿ ಐ‌ಎ‌ಎಸ್ ಅಧಿಕಾರಿ, ದಿ. ಶ್ರೀಮತಿ ಅನಿತಾಕೌಲ್ ನೆನಪಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಟೇಬಾಗಿಲು ತಲ್ಲೂರು ಇಲ್ಲಿನ ಶಿಕ್ಷಕರಾದ ವಿಠಲ್ ಕಾಮತ್ ಆಯ್ಕೆಯಾಗಿದ್ದಾರೆ.

ಇವರು ಯಕ್ಷಗಾನ, ನಾಟಕ, ಕ್ರೀಡೆ ಹಾಗೂ ಇನ್ನಿತರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ.

ಇವರ ಪ್ರತಿಭೆಯನ್ನು ಗುರುತಿಸಿ ಜ.22ರಂದು ಬೆಂಗಳೂರಿನ ಬಸವನಗುಡಿಯ ನ್ಯಾಶನಲ್ ಕಾಲೇಜಿನ ಡಾ. ಹೆಚ್ಚೆನ್ ಮಲ್ಟಿಮೀಡಿಯಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಬೆಂಗಳೂರಿನ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!