Sunday, September 8, 2024

ಜ. 21ರಿಂದ ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಕುಂದಾಪುರ: ಭಾರತೀಯ ಜನತಾ ಪಕ್ಷದ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ ಜ.29ರ ತನಕ ನಡೆಯಲಿದೆ. ಜ.21ರಂದು ಕೋಟತಟ್ಟು ಗ್ರಾಮದಲ್ಲಿ ಚಾಲನೆ ನೀಡಲಾಗುವುದು. ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಅಭಿಯಾನ ನಡೆಯಲಿದ್ದು ರಾಜ್ಯ, ಕೇಂದ್ರ ಸರ್ಕಾರಗಳ ಸಾಧನೆಯನ್ನು ಮನೆಗೆ ತಲುಪಿಸುವ ಕಾರ್ಯ ಆಗಲಿದೆ ಎಂದು ವಿಜಯ ಸಂಕಲ್ಪ ಅಭಿಯಾನದ ಕ್ಷೇತ್ರ ಪ್ರಭಾರಿ ಗೀತಾಂಜಲಿ ಸುವರ್ಣ ಹೇಳಿದರು.

ಅವರು ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಈ ಅಭಿಯಾನದ ಮೂಲಕ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಭೇಟಿ ಮಾಡಲಾಗುವುದು. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿ ಕಾರ್ಯಗಳ ತಿಳಿಸಲಾಗುವುದು. ಜೊತೆಯಲ್ಲಿ ಕಳೆದ 6 ವರ್ಷದ ಹಿಂದೆ ಸದಸ್ಯತ್ವ ಅಭಿಯಾನ ಮಾಡಲಾಗಿದ್ದು, ಈಗ ಮರಳಿ ಮಿಸ್ ಕಾಲ್ ಕೊಡುವ ಮೂಲಕ ಸದಸ್ಯತ್ವ ನೊಂದಣಿ ಮಾಡಲಾಗುವುದು. ಕಾರ್ಯಕರ್ತರ ಮನೆಯ ಗೋಡೆಗಳಲ್ಲಿ ಕಮಲದ ಚಿಹ್ನೆ ಬಿಡಿಸುವ ಕಾರ್ಯವೂ ನಡೆಯಲಿದೆ. ಜ.29ರಂದು ಪ್ರಧಾನ ಮಂತ್ರಿಗಳ ಮನ್‌ಕಿ ಬಾತ್ ಕಾರ್ಯಕ್ರಮವನ್ನು ಎಲ್ಲ ಬೂತ್ ಅಧ್ಯಕ್ಷರು ವೀಕ್ಷಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಇದನ್ನು ಅಪ್ ಮೂಲಕ ಹಂಚಿಕೊಳ್ಳಬಹುದಾಗಿದೆ ಎಂದರು.

ಇನ್ನೂ ಮೂರು ತಿಂಗಳಲ್ಲಿ ಚುನಾವಣೆ ಬರಲಿದೆ. ಅದಕ್ಕೆ ಪೂರಕವಾಗಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿದೆ. ಈ ವಿಜಯ ಸಂಕಲ್ಪ ಅಭಿಯಾನದಲ್ಲಿ ಶಾಸಕರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ ಕುಮಾರ್ ಕೊಡ್ಗಿ, ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!