spot_img
Sunday, April 19, 2026
spot_img

ಗೆಳೆಯರ ಬಳಗ ಕಾರ್ಕಡ ವಾರ್ಷಿಕೋತ್ಸವ: ಸಮ್ಮಾನ

ಕೋಟ: ಗೆಳೆಯರ ಬಳಗ ಕಾರ್ಕಡ- ಸಾಲಿಗ್ರಾಮ ಇದರ ೩೫ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸಮ್ಮಾನ ಜ.28 ರಂದು ಕಾರ್ಕಡ ಹೊಸ ಹಿ.ಪ್ರಾ.ಶಾಲೆ “ಪಾರ್ವತಿ ಎಸ್. ಹೊಳ್ಳ ರಂಗ ಮಂಟಪದಲ್ಲಿ ಜರಗಿತು.

ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ ಮಾತನಾಡಿ, ಗೆಳೆಯರ ಬಳಗವು ಮಾದರಿ ಸಂಸ್ಥೆಯಾಗಿದ್ದು, ಇಲ್ಲಿನ ಪ್ರತಿಯೊಂದು ಕಾರ್ಯಕ್ರಮಗಳು ಇತರ ಸಂಘಟನೆಗಳಿಗೆ ಮಾದರಿ ಎಂದರು.

ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ಶಂಕರ ದೇವಾಡಿಗರನ್ನು ಸಮ್ಮಾನಿಸಲಾಯಿತು.

ನಿವೃತ್ತ ಯೋಧ ರವಿ ನಾಯರಿ, ಕೊಲ್ಲೂರು ಮೂಕಾಂಬಿಕಾ ದೇಗುಲದ ಧರ್ಮದರ್ಶಿ ಕೆ.ಪಿ. ಶೇಖರ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಮಂಜುನಾಥ ಕೆ. ಎಸ್. ಹಾಗೂ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಅಚ್ಲಾಡಿ ಅವರನ್ನು ಗೌರವಿಸಲಾಯಿತು. ಶ್ರೀಪ್ರಿಯ, ಕಾರ್ತಿಕ್, ಸಮೀಕ್ಷಾ, ಗೀಷ್ಮ, ಸುಜಿನ್ ಕುಮಾರ್, ಅವರಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ದತ್ತಿನಿಧಿ ವಿತರಿಸಲಾಯಿತು.

ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಕೆ. ಅಚ್ಯುತ ಪೂಜಾರಿ, ನಿರ್ದೇಶಕಿ ಪ್ರೇಮ ಶಂಭು ಪೂಜಾರಿ,ನ್ಯೂ ಕಾರ್ಕಡ ಶಾಲೆ ಮುಖ್ಯ ಶಿಕ್ಷಕ ಎನ್. ಪ್ರಭಾಕರ ಕಾಮತ್,ಕೋಟ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ ಆಚಾರ್ಯ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಶಶಿಧರ್ ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ಸ್ಥಳೀಯ ಪ್ರತಿಭೆಗಳಿಂದ ಗಾನ ಹಾಗೂ ನೃತ್ಯವೈವಿಧ್ಯ, ಕನ್ನಡ ಮತ್ತು ಸಂಸ್ಕೃತಿ ಉಡುಪಿ ಜಿಲ್ಲೆ ಸಹಕಾರದಿಂದ ಕೆ.ಶೀನ ಮತ್ತು ಬಳಗದವರಿಂದ ಸಾಮಾಜಿಕ ನಾಟಕ “ಯಾರಿವಳು” ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!