Sunday, September 8, 2024

ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಗೆ ಧ್ವಜಸ್ತಂಭ ಕೊಡುಗೆ ಅನಾವರಣ

ಕುಂದಾಪುರ: ಸ.ಮಾ.ಹಿ.ಪ್ರಾ.ಶಾಲೆ ವಂಡ್ಸೆಯಲ್ಲಿ 74ನೇ ಗಣರಾಜ್ಯೋತ್ಸದ ಸಂದರ್ಭದಲ್ಲಿ ಶ್ರೀಮತಿ ಜಯಂತಿ ಮತ್ತು ಶ್ರೀ ರಾಜೇಂದ್ರ ಗಾಣಿಗ ಮತ್ತು ಮಕ್ಕಳು ಸುಮಾರು ಒಂದೂವರೆ ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟ ನೂತನ ಧ್ವಜಸ್ತಂಭವನ್ನು ಅನಾವರಣಗೊಳಿಸಿ, ಧ್ವಜಾರೋಹಣ ನೆರವೇರಿಸಲಾಯಿತು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಕಲ್ಪನಾ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಸದಸ್ಯರಾದ ಶಶಿಕಲಾ, ಸುಶೀಲಾ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಖಜಾಂಚಿ ಗಿಳಿಯಾರು ಶ್ರೀಧರ ಶೆಟ್ಟಿ, ಟ್ರಸ್ಟಿಗಳಾದ ಸೀತಾರಾಮ ಶೆಟ್ಟಿ, ಎಪಿ‌ಎಂಸಿ ಸದಸ್ಯರಾದ ಸಂಜೀವ ಪೂಜಾರಿ, ಧ್ವಜಸ್ತಂಭದ ಕೊಡುಗೆ ನೀಡಿದ ದಾನಿಗಳಾದ ರಾಜೇಂದ್ರ ಗಾಣಿಗ, ಮುಖ್ಯೋಪಾಧ್ಯಾಯಿನಿ ಆಶಾ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಲ್ಲಿ ಭಾರತದ ಭವ್ಯ ಪರಂಪರೆ, ಇತಿಹಾಸ, ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನದ ಮೌಲ್ಯಗಳ ಅರಿವು ಮೂಡಿಸಲು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಯಿತು. ನಾಲ್ಕು ತಂಡಗಳಲ್ಲಿ ಕುಳ್ಳಿರಿಸಿ, ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು. ನಿವೃತ್ತ ಶಿಕ್ಷಕರೂ, ಶೈಕ್ಷಣಿಕ ಚಿಂತಕರು ಆದ ಸೀತರಾಮ ಶೆಟ್ಟಿಯವರು ಸಂಪೂರ್ಣ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!