Sunday, September 8, 2024

ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ: ನೂತನ ಕಟ್ಟಡದ ಶಿಲಾನ್ಯಾಸ


ಬ್ರಹ್ಮಾವರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ (ರಿ.) ಬೆಂಗಳೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ (ಬ್ರಹ್ಮಾವರ ಬೋರ್ಡ್ ಹೈ ಸ್ಕೂಲ್) ಇದರ ನೂತನ ಕಟ್ಟಡ ನಿರ್ಮಾಣಕ್ಕೆ ದಾನಿಗಳಾದ ಎಚ್.ಎಸ್. ಶೆಟ್ಟಿ ಅವರು ಕೊಡಮಾಡಿದ ಎರಡೂವರೆ ಕೋಟಿಗೂ ಅಧಿಕ ವೆಚ್ಚದ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಇಂದು ದಾನಿಗಳಾದ ಹೆಚ್. ಎಸ್ ಶೆಟ್ಟಿ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ (ರಿ.) ಬೆಂಗಳೂರು ಉಪಾಧ್ಯಕ್ಷ ನಾಗರಾಜ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಪೌಢ ಶಾಲಾ ವಿಭಾಗದ ಅಧ್ಯಕ್ಷ ರಾಮಕೃಷ್ಣ, ಶಾಲಾಭಿವೃದ್ಧಿ ಸಮಿತಿ ಪ್ರಾಥಮಿಕ ವಿಭಾಗದ ಅಧ್ಯಕ್ಷ ಪಾಂಡುರಂಗ ಕುಲಾಲ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಡಯಟ್ ಉಪ ಪ್ರಾಂಶುಪಾಲ ಅಶೋಕ್ ಕಾಮತ್, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ಪ್ರಾಂಶುಪಾಲ ರವೀಂದ್ರ ಉಪಾಧ್ಯ, ಉಪ ಪ್ರಾಂಶುಪಾಲ ಬಿ.ಟಿ ನಾಯ್ಕ್, ಮುಖ್ಯೋಪಾಧ್ಯಾಯರಾದ ದೇವ ಕುಮಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!