Sunday, September 8, 2024

ಬಲಿಪ ನಾರಾಯಣ ಭಾಗವತ ವಿಧಿವಶ

ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ಬಲಿಪ ನಾರಾಯಣ ಭಾಗವತ (85ವ) ವಯೋಸಹಜವಾಗಿ ಫೆ.16ರ ಸಂಜೆ ಗಂಟಾಲಕಟ್ಟೆಯ ಸ್ವಗೃಹದಲ್ಲಿ ನಿಧನ ಹೊಂದಿದರು.

ಅಜ್ಜ ಬಲಿಪರ ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿದ ಬಲಿಪರು ಕಟೀಲು ಮೇಳದಲ್ಲಿ ಸುದೀರ್ಘ ನಾಲ್ಕುವರೆ ದಶಕಗಳ ಕಲಾಸೇವೆಗೈದಿದ್ದರು. ತಮ್ಮ ಕಂಚಿನ ಕಂಠ ಮತ್ತು ರಂಗನಡೆಯಿಂದ ಪ್ರಸಿದ್ಧರಾಗಿದ್ದರು. ಹಲವು ಯಕ್ಷಗಾನ ಪ್ರಸಂಗಗಳು ಕಂಠಸ್ಥವಾಗಿದ್ದವು. ಪ್ರಸಂಗಕರ್ತರಾಗಿಯೂ ಖ್ಯಾತರಾಗಿದ್ದರು. ಮುಗ್ಧಮನಸ್ಸಿನ ಬಲಿಪರು ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ‘ಬಲಿಪಯಾನ’ ಅವರಿಗೆ ಸಮರ್ಪಿಸಿದ ಅಭಿನಂದನ ಗ್ರಂಥ. ಮೂವರು ಪುತ್ರರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!