spot_img
Friday, April 24, 2026
spot_img

ಕುಂದಾಪುರ: ನವೀಕೃತ ಹೂವಿನ ಮಾರುಕಟ್ಟೆ ಉದ್ಘಾಟನೆ


ಕುಂದಾಪುರ: ಪುರಸಭಾ ವ್ಯಾಪ್ತಿಯ ಹೂವಿನ ಮಾರುಕಟ್ಟೆ ನವೀಕರಣಗೊಂಡಿದ್ದು ಅದರ ಉದ್ಘಾಟನಾ ಕಾರ್ಯಕ್ರಮ ಮಾ.17ರಂದು ನಡೆಯಿತು.

ಕುಂದಾಪುರ ಪುರಸಭೆಯ ಸ್ಥಳೀಯ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ನವೀಕೃತ ಹೂವಿನ ಮಾರುಕಟ್ಟೆ ದೇವಕಿ ಸಣ್ಣಯ್ಯ ಉದ್ಘಾಟಿಸಿ, ನಗರೋತ್ಥಾನ ಯೋಜನೆಯ ಅನುದಾನ ಬಳಸಿಕೊಂಡು ಹೂವಿನ ಮಾರುಕಟ್ಟೆ ನವೀಕರಣ ಮಾಡಲಾಗಿದೆ. ಕುಂದಾಪುರ ಪೇಟೆಯ ನಡುವೆ ಇರುವ ಹೂವಿನ ಮಾರುಕಟ್ಟೆಯನ್ನು ಸುಂದರವಾಗಿ ನವೀಕರಣ ಮಾಡಲಾಗಿದೆ ಎಂದರು.

ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮಾತನಾಡಿ, ಕುಂದಾಪುರ ಪುರಸಭೆಗೆ ಲಭ್ಯವಾದ 6.5 ಕೋಟಿ ನಗರೋತ್ಥಾನ ಯೋಜನೆಯ ಅನುದಾನದ ಕ್ರಿಯಾಯೋಜನೆ ಸಿದ್ಧಪಡಿಸುವ ಸಂದರ್ಭ ಸ್ಥಳೀಯ ಸದಸ್ಯರ ಅಪೇಕ್ಷೆಯಂತೆ ಹೂವಿನ ಮಾರುಕಟ್ಟೆ ನವೀಕರಣಕ್ಕೆ ಒತ್ತು ನೀಡಲಾಯಿತು ಎಂದರು.

ಈ ಸಂದರ್ಭದಲ್ಲಿ ಶೆಣೈ ಪಾರ್ಕನ್ನು ಪುರಸಭಾ ಉಪಾಧ್ಯಕ್ಷ ಸಂದೀಪ್ ಖಾರ್ವಿ ಉದ್ಘಾಟಿಸಿದರು. ಪುರಸಭೆಯ ಸದಸ್ಯರಾದ ಪ್ರಭಾಕರ, ಶ್ರೀಧರ ಶೇರುಗಾರ್, ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಶೇಖರ ಪೂಜಾರಿ, ರಾಘವೇಂದ್ರ ಖಾರ್ವಿ, ನಾಮನಿರ್ದೇಶನ ಸದಸ್ಯರಾದ ಪುಷ್ಪಾ ಶೇಟ್, ರತ್ನಾಕರ, ಪುರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪುರಸಭಾ ಮುಖ್ಯಾಧಿಕಾರಿ ಮಂಜುನಾಥ ವಂದಿಸಿದರು. ಚಂದ್ರಕಾಂತ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!