Sunday, September 8, 2024

ದ್ವಿತೀಯ ಪಿಯುಸಿ ಫಲಿತಾಂಶ: ಕುಂದಾಪುರದ ನೇಹಾ ಜೆ.ರಾವ್ ರಾಜ್ಯಕ್ಕೆ ತೃತೀಯ, ಉಡುಪಿ ಜಿಲ್ಲೆಗೆ ಪ್ರಥಮ


ಕುಂದಾಪುರ: ದ್ವಿತೀಯ ಪಿಯುಸಿಯ ಫಲಿತಾಂಶ ಇಂದು ಹೊರಬಿದ್ದಿದ್ದು, ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೇಹಾ ಜೆ ರಾವ್ ವಿಜ್ಞಾನ ವಿಭಾಗದ ಪಿಸಿ‌ಎಂಸಿಯಲ್ಲಿ 594 ಅಂಕಗಳೊಂದಿಗೆ ರಾಜ್ಯದಲ್ಲಿ ತೃತೀಯ ಸ್ಥಾನ ಪಡೆದುಕೊಂಡು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ.

ಕುಂದಾಪುರ ತಾಲೂಕಿನ ಬಸ್ರೂರು ಮೂರುಕೈ ಸಮೀಪದ ಬ್ಯಾಂಕರ್ಸ್ ಕಾಲೊನಿ ನಿವಾಸಿಯಾಗಿರುವ, ಜಗದೀಶ್ ರಾವ್ ಹಾಗೂ ಸ್ಮಿತಾ ಜೆ ರಾವ್ ಅವರ ಪುತ್ರಿ.

ಮುಂದೆ ಬಿ.ಟೆಕ್ ಮಾಡಿ ಇಂಜಿನಿಯರ್ ಆಗಬೇಕು ಎನ್ನುವ ನೇಹಾ, ಕಾಲೇಜಿನಲ್ಲಿ ಉತ್ತಮ ಬೋಧನೆ, ತಂದೆ-ತಾಯಿ, ತಾತ ನೀಡುತ್ತಿದ್ದ ಉತ್ತೇಜನ ನನ್ನ ಸಾಧನೆಗೆ ಕಾರಣ ಎನ್ನುತ್ತಾರೆ.

ನೇಹಾಳ ಸಾಧನೆಗೆ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.
ಮಧ್ಯಮ ವರ್ಗದ ಕುಟುಂಬದ ನೇಹಾಳ ಸಹೋದರ ಯಜ್ಞೇಶ್ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ. ತಾತ ಎನ್.ಎನ್.ರಾವ್ ನಿವೃತ್ತ ಶಿಕ್ಷಕರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!