Sunday, September 8, 2024

ಭಂಡಾರ್ಕಾರ್ಸ್ ಕಾಲೇಜು ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ನೆಂಪು ಗಣಪತಿ ದೇವಸ್ಥಾನ ಕೆರೆಯ ಹೂಳೆತ್ತುವ ಕಾರ್ಯ

ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ನೆಂಪುವಿನ ಪುರಾತನ ದೇವಾಲಯ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯ ನಡೆಯಿತು.

ಕಾರ್ಯಕ್ರಮಕ್ಕೆ ದೇವಸ್ಥಾನದ ಧರ್ಮದರ್ಶಿ ರಾಮಕೃಷ್ಣ ಭಟ್ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಅರುಣ್ ಎ.ಎಸ್, ರಾಮಚಂದ್ರ ಆಚಾರ್, ಅಣ್ಣಪ್ಪ ಪೂಜಾರಿ ಹಾಗೂ ಉಪನ್ಯಾಸಕ ಗಿರಿರಾಜ್ ಭಟ್ ಉಪಸ್ಥಿತರಿದ್ದರು.

90 ವಿದ್ಯಾರ್ಥಿಗಳು ಒಂದು ದಿನದ ಈ ಶಿಬಿರದಲ್ಲಿ ಭಾಗವಹಿಸಿ ದೇವಸ್ಥಾನದ ಪರಿಸರವನ್ನು ಸ್ವಚ್ಛ ಗೊಳಿಸಿ, ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಪಾಲ್ಗೊಂಡರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!