spot_img
Monday, April 27, 2026
spot_img

ಮೂಡ್ಲಕಟ್ಟೆ ಎಂಐಟಿಕೆ: ಯುವ-2023 ಉದ್ಘಾಟನೆ

ಕುಂದಾಪುರ: ಮೂಡ್ಲಕಟ್ಟೆ ಎಂಐಟಿ ಕಾಲೇಜಿನ ಎಂ.ಬಿ.ಎ ವಿಭಾಗದ ರಾಜ್ಯಮಟ್ಟದ ಅಂತರಕಾಲೇಜು ಮ್ಯಾನೇಜ್‌ಮೆಂಟ್ ಮತ್ತು ಸಾಂಸ್ಕೃತಿಕ ಹಬ್ಬ ಯುವ-2023 ಕಾಲೇಜಿನ ಸಂಭಾಗಣದಲ್ಲಿ ಉದ್ಘಾಟನೆಗೊಂಡಿತು.

ಮುಖ್ಯ ಅತಿಥಿಯಾಗಿ ಉಡುಪಿಯ ಅಜ್ಜರಕಾಡಿನ ಡಾ. ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿಯವರು ದೀಪ ಪ್ರಜ್ವಲನದೊಂದಿಗೆ ಈ ಕಾರ್ಯಕ್ರಮ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಮಾತನಾಡುತ್ತಾ ಕಾರ್ಯಕ್ರಮದ ಹೆಸರಾದ ಯುವ-2023, ಬಹಳ ಅರ್ಥಪೂರ್ಣವಾಗಿದೆ. ದೇಶವನ್ನು ಸಧೃಡವಾಗಿ ಕಟ್ಟುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದು ಎಂದು ಹೇಳಿದರು. ಅಮೂಲ್ಯವಾದ ಭಾರತೀಯ ಸಂಸ್ಕೃತಿಯನ್ನು ಮುಂದುವರಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದು ಅತ್ಯ‌ಅವಶ್ಯ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ಮಾತನಾಡಿ ಇಂತಹ ಕಾರ್ಯಕ್ರಮಗಳು ಭಾರತೀಯ ಪರಂಪರೆಯಾದ ವೈವಿಧ್ಯತೆಯಲ್ಲಿ ಏಕತೆಯನ್ನು ಎತ್ತಿ ತೋರಿಸುತ್ತದೆ ಎಂದರು. ಐ.ಎಂ,ಜೆ. ಸಂಸ್ಥೆಗಳ ನಿರ್ದೇಶಕರಾದ ಪ್ರೋ. ದೋಮ ಚಂದ್ರಶೇಖರ್‌ರವರು ಮಾತನಾಡಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಸಹಾನುಭೂತಿ, ಸೃಜನಶೀಲv ಹಾಗೂ ಚಿಕ್ಕ ಮಗುವಿನಂತೆ ಕೂತುಹಲವನ್ನು ಸದಾ ಬೆಳೆಸಿಕೊಳ್ಳುವುದು ಬಹಳ ಮುಖ್ಯ ಮತ್ತು ಕೆಲಸಗಳನ್ನು ವಿಭಿನ್ನವಾಗಿ ಮಾಡಿ ತೋರಿಸುವ ಸಾಮಥ್ಯವನ್ನು ಹೊಂದಬೇಕು ಎಂದರು.

ಐ.ಎಂ.ಜೆ.ಐ.ಎಸ್.ಸಿ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ, ಐ.ಎಂ.ಜೆ.ಐ.ಎಸ್.ಸಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಎಂಐಟಿಕೆ ಉಪಪಾಂಶುಪಾಲರಾದ ಪ್ರೋ. ಮೆಲ್ವಿನ್ ಡಿಸೋಜ್‌ರವರು, ಡೀನ್ ಟಿ.ಪಿ.ಐ.ಆರ್. ಪ್ರೊ. ಅಮೃತಮಾಲಾ, ಎಂಬಿ‌ಎ ವಿಭಾಗ ಮುಖ್ಯಸ್ಥರಾದ ಪ್ರೊ. ಹರೀಶ ಕಾಂಚನ್, ಆಹ್ವಾನಿತ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಕಾಲೇಜಿನ ವಿಭಾಗಮುಖ್ಯಸ್ಥರು, ಉಪನ್ಯಾಸವರ್ಗ ಮತ್ತು ವಿದ್ಯಾರ್ಥಿವೃಂದದವರು ಉಪಸ್ಥಿತರಿದ್ದರು.

ಸಿಂಚನಾ ಶೆಟ್ಟಿ ಸ್ವಾಗತಿಸಿದರು. ನಮೃತಾ ಮುಖ್ಯ ಅತಿಥಿಯವರನ್ನು ಪರಿಚಯಿಸಿದರು. ಸೃಷ್ಠಿ ಕುಂದರ್‌ರವರು ವಂದಿಸಿದರು. ಕಾರ್ತಿಕ್ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!