spot_img
Monday, April 27, 2026
spot_img

ನಾದಾವಧಾನ ಪ್ರಥಮ ವಾರ್ಷಿಕೋತ್ಸವ ಉದ್ಘಾಟನೆ


ತೆಕ್ಕಟ್ಟೆ: ಜೂ. 2: ತಪ್ಪು ಮಾಡುತ್ತ ಮಾಡುತ್ತ ತಪ್ಪನ್ನು ಗೃಹಿಸಿಕೊಂಡು ತಪ್ಪನ್ನು ತಿದ್ದಿಕೊಳ್ಳುವ ಕೆಲಸ ವಿದ್ಯಾರ್ಥಿಗಳಿಂದಾಗಬೇಕು. ಆವಾಗಲೇ ಆ ವಿದ್ಯಾರ್ಥಿ ಪರಿಪೂರ್ಣ ಸಾಧಿಸುವಿಕೆಯತ್ತ ಮುನ್ನುಗ್ಗುತ್ತಾನೆ. ಭಯವನ್ನು ತೊರೆಯುವುದಕ್ಕೆ ಮತ್ತೆ ಮತ್ತೆ ವೇದಿಕೆ ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಯಕ್ಷಗಾನ ಭಾಗವತಿಗೆ ಕಲಿತ ವಿದ್ಯಾರ್ಥಿಗೆ ಸಾರ್ವಜನಿಕವಾಗಿ ವೇದಿಕೆ ಕಲ್ಪಿಸಲಾಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಎ.ಪಿ. ಪಾಠಕ್ ಮಾತನ್ನಾಡಿದರು.

ತೆಕ್ಕಟ್ಟೆ ಹಯಗ್ರೀವದಲ್ಲಿ ನಾದಾವಧಾನ ಸಂಸ್ಥೆ ಆಯೋಜಿಸಿದ, ಯಶಸ್ವೀ ಕಲಾವೃಂದದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜೂ 2ರಂದು ಪಾಠಕ್ ಉದ್ಘಾಟಿಸಿ ಮಾತನ್ನಾಡಿದರು.

ಮುಖ್ಯ ಅತಿಥಿಗಳಾಗಿ ಅಜಿತ್ ಕಾರಂತ್, ನಾದಾವಧಾನ ಸಂಸ್ಥೆಯ ರೂವಾರಿ ಎನ್.ಜಿ. ಹೆಗಡೆ ಯಲ್ಲಾಪುರ, ಯಶಸ್ವಿ ಕಲಾವೃಂದದ ಕಾರ್ಯದರ್ಶಿ ವೆಂಕಟೇಶ ವೈದ್ಯ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗುರುಗಳಾದ ಲಂಬೋದರ ಹೆಗಡೆ ನಿಟ್ಟೂರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯಕ್ಷ-ಗಾನ-ವೈಭವ ರಂಗದಲ್ಲಿ ಪ್ರಸ್ತುತಿಗೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!