spot_img
Monday, April 27, 2026
spot_img

ಎ‌ಐ‌ಇಟಿ ‘ಚಿಂತನ- ಮಂಥನ’- ರೀಡರ್ಸ್ ಕ್ಲಬ್ : ’ಬೇಂದ್ರೆ ಅವರ ಒಡನಾಟ’ ಉಪನ್ಯಾಸ


ಮೂಡುಬಿದಿರೆ: ‘ಕುತೂಹಲದಿಂದ ಆವಿಷ್ಕಾರ ಸಾಧ್ಯ’ ಎಂದು ಸಾಹಿತಿ ಸುರೇಶ್ ಕುಲಕರ್ಣಿ ಹೇಳಿದರು.
ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿ (ಎ‌ಐ‌ಇಟಿ)ನಲ್ಲಿ ‘ಚಿಂತನ- ಮಂಥನ’ ರೀಡರ್ಸ್ ಕ್ಲಬ್ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ’ಬೇಂದ್ರೆ ಅವರ ಒಡನಾಟ’ ಕುರಿತು ಅವರು ಉಪನ್ಯಾಸ ನೀಡಿದರು.

‘ನಾದ’ ಸ್ವರದಿಂದ ಮಾತ್ರ ಸಮೂಹ ಸಂವಹನ ಯಶಸ್ವಿಯಾಗುತ್ತದೆ. ‘ನಾ’ ಎಂಬುದೇ ಅಹಂಕಾರ. ‘ದ’ ಎಂದರೆ ಧ್ವನಿ. ಅಹಂಕಾರವನ್ನು ಬಿಟ್ಟ ಧ್ವನಿ ಮಾತ್ರ ಜನರಿಗೆ ತಲುಪಲು ಸಾಧ್ಯ. ಇಂತಹ ವಿಚಾರಗಳನ್ನು ಅನುಷ್ಠಾನಕ್ಕೆ ತರಲು ಬೇಂದ್ರೆಯವರ ಸಾಹಿತ್ಯದ ಓದು ಅಗತ್ಯವಿದೆ ಎಂದರು.

ದೇಶ ವಿದೇಶದ ಬಗ್ಗೆ ನಾವು ತಿಳಿದುಕೊಳ್ಳುತ್ತೇವೆ. ಆದರೆ ನಮ್ಮ ಊರು, ರಾಜ್ಯದ, ಸುತ್ತಲಿನ ವಿ?ಯದ ಕುರಿತು ನಮಗೆ ಹೆಚ್ಚು ಜ್ಞಾನ ಇರುವುದಿಲ್ಲ. ಬೇಂದ್ರೆಯವರ ಮೇಲೆ 16 ಜನ ಪಿಹೆಚ್.ಡಿ ಮಾಡಿದ್ದಾರೆ. ಅವರ ಕನ್ನಡ ಕವನವನ್ನು ಜರ್ಮನಿಯಲ್ಲಿ ಅನುವಾದ ಮಾಡಿ ಓದುತ್ತಿದ್ದಾರೆ. ಇದರ ಅರಿವು ನಮಗಿಲ್ಲ ಎಂದರು.

’ನಮ್ಮ ಗುರಿಯ ಕಡೆ ದಿನನಿತ್ಯ ಪ್ರಯತ್ನ ಮಾಡಬೇಕು. ಕುತೂಹಲ ಬೆಳೆಸಿಕೊಳ್ಳಬೇಕು’ ಎಂದರು.

’ಚಿಂತನ- ಮಂಥನ’ ಸಂಯೋಜಕರಾದ ಶಶಿಕುಮಾರ್ ಹಾಗೂ ಶ್ವೇತಾ, ಕನ್ನಡ ಸಂಘ ಸಂಯೋಜಕ ವಾಸುದೇವ್ ಶಹಾಪೂರ ಇದ್ದರು.
ವಿದ್ಯಾರ್ಥಿನಿ ತೇಜೋಮಯಿ ಸ್ವಾಗತ ಗೀತೆ ಹಾಡಿದರು. ವಿದ್ಯಾರ್ಥಿನಿ ಪೂರ್ವಿಕಾ ನಿರೂಪಿಸಿದರು. ವಿದ್ಯಾರ್ಥಿನಿ ಕೆ. ಜಿ. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದು. ವಿದ್ಯಾರ್ಥಿ ಗುರುಕಿರಣ್ ಪಿ. ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!