15.3 C
New York
Friday, September 29, 2023

Buy now

spot_img

ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಎಸ್. ವಿ. ಪಿ.ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಅಭಯ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಜೂನ್ 3 ರಂದು ಮಿಲಾಗ್ರಿಸ್  ಕಾಲೇಜಿನಲ್ಲಿ ನಡೆದ ರಕ್ಷಕ- ಶಿಕ್ಷಕ  ಸಂಘದ ಮಹಾಸಭೆಯಲ್ಲಿ ಉಪಾಧ್ಯಕ್ಷರಾದ ವಿನ್ಸೆಂಟ್ ಡಿ ಸೋಜಾ  ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ವಹಿಸಿದ್ದರು.

ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಮಾಲತಿ ರಮೇಶ್, ಜೊತೆ ಕಾರ್ಯದರ್ಶಿ ಶ್ರೀಮತಿ ಡೇಬ್ರಾ ಡಿ.ಸೋಜಾ, ಉಪ ಪ್ರಾಂಶುಪಾಲರಾದ ಶ್ರೀಮತಿ ಸೋಫಿಯಾ ಡಯಾಸ್, ರಕ್ಷಕ- ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಸುರೇಖಾ ಭಟ್, ಐಕ್ಯೂಏಸಿ ಕೋ- ಆರ್ಡಿನೇಟರ್ ಡಾ. ಜಯರಾಮ ಶೆಟ್ಟಿಗಾರ್, ಕೋಶಾಧಿಕಾರಿ ಶ್ರೀಮತಿ ರಾಧಿಕಾ ಪಾಟ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,874FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!