Sunday, September 8, 2024

ರಾಹುಲ್ ಗಾಂಧಿಯವರ ತೇಜೊವಧೆಯ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ


ಕುಂದಾಪುರ : ರಾಹುಲ್ ಗಾಂಧಿಯವರ ತೇಜೊವಧೆಯ ವಿರುದ್ಧ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ನೇತೃತ್ವದಲ್ಲಿ ಜು.12ರಂದು ಮೌನ ಪ್ರತಿಭಟನೆ ನಡೆಯಲಿದೆ.

ರಾಹುಲ್ ಗಾಂಧಿಯವರು ವಿವಿಧ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಬಹಿರಂಗಪಡಿಸುತ್ತಿದ್ದಾರೆ. ಈ ನಿರ್ಭೀತಿ ನಡೆಯನ್ನು ಸಹಿಸಿಕೊಳ್ಳದೆ ಮೋದಿ ಪದನಾಮ ಬಳಕೆಯನ್ನೇ ನೆಪವಾಗಿರಿಸಿಕೊಂಡು ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಕೇಂದ್ರ ಸರಕಾರ ಹಾಗೂ ಬಿಜೆಪಿಯ ಸೇಡಿನ ಹುನ್ನಾರವನ್ನು ಪ್ರತಿಭಟಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಜು. 12 ಬುಧವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ತನಕ ಕುಂದಾಪುರ ಶಾಸ್ತ್ರಿ ವೃತ್ತ ಬಳಿಯ ತಾಲೂಕು ಪಂಚಾಯತ್ ಎದುರು ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!