Sunday, September 8, 2024

ಯುವ ಬಂಟರ ಸಂಘ ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ ಸತೀಶ್ ಶೆಟ್ಟಿ ಹೆಸ್ಕತ್ತೂರು

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅಗಸ್ಟ್ 20ರ ಭಾನುವಾರ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆಯಾಗಿದ್ದಾರೆ ಎಂದು ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತೀಶ್ ಶೆಟ್ಟಿ ಅವರು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾಗಿ, ಯೂತ್ ರೆಡ್ ಕ್ರಾಸ್ ಘಟಕದ ಸಂಚಾಲಕರಾಗಿ, ಪ್ರಸ್ತುತ ರೋವರ್ಸ್ ಅಂಡ್ ರೇಂಜರ್ಸ್ ನ ಘಟಕದ ಕಾರ್ಯಕ್ರಮಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!