spot_img
Tuesday, April 28, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ: ಕೊಡುಗೆ ಹಸ್ತಾಂತರ

kundapura: “ಗ್ರಾಮೀಣ ಪ್ರದೇಶದ ಶಾಲೆಯಾಗಿದ್ದುಕೊಂಡು ಹೆಸಕುತ್ತೂರು ಪ್ರಾಥಮಿಕ ಶಾಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ನಿಜಕ್ಕೂ ಅಭಿನಂದನೀಯ” ಎಂದು ಬ್ಯಾಂಕ್ ಆಫ್ ಬರೋಡಾದ ಸಲ್ವಾಡಿಯ ಶಾಖಾ ಪ್ರಬಂಧಕರಾದ ಸುನೀಲ್ ರವರು ನುಡಿದರು.

ಅವರು ಬ್ಯಾಂಕ್ ಆಫ್ ಬರೋಡಾದ 116ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಂಗವಾಗಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ಪ್ಲಾಸ್ಟಿಕ್ ಕುರ್ಚಿಗಳನ್ನು ಹಸ್ತಾಂತರಿಸಿ ಮಾತನಾಡುತ್ತಿದ್ದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ನ ಸಹಾಯಕ ಪ್ರಬಂಧಕರಾದ ಅನುಷಾ ಹಾಗೂ ಪುಷ್ಪಲತಾ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಗಾಯತ್ರಿ ಆಚಾರ್, ಶಾಲಾ ಸಹ ಶಿಕ್ಷಕರಾದ ಜಯರಾಮ ಶೆಟ್ಟಿ, ವಿಜಯಾ ಆರ್, ರವೀಂದ್ರ ನಾಯಕ್, ಗೌರವ ಶಿಕ್ಷಕಿ ಮಧುರಾ, ಶಾಲಾ ಎಸ್ ಡಿ ಎಂ ಸಿ ಸದಸ್ಯರಾದ ಜಗದೀಶ್ ಶೆಟ್ಟಿಗಾರ್, ಶ್ರೀಕಾಂತ ಶೆಟ್ಟಿ, ವಿನುತ, ವಿಜಯ ಕುಲಾಲ, ಆಶಾ ಕುಲಾಲ ಉಪಸ್ಥಿತರಿದ್ದರು. 

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಸ್ವಾಗತಿಸಿದರು. ಸಹಶಿಕ್ಷಕರಾದ ಅಶೋಕ ತೆಕ್ಕಟ್ಟೆ ನಿರೂಪಿಸಿದರು ಹಾಗೂ ವಿಜಯ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!