Sunday, September 8, 2024

ಕಾರ್ಕಳ ಎಸ್.ವಿ.ಟಿ ಪದವಿಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಾಗಾರ


ಕಾರ್ಕಳ: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೇದಿಕೆ ಮತ್ತು ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಇತಿಹಾಸ ವಿಷಯ “ಪುನಶ್ಚೇತನ ಕಾರ್ಯಾಗಾರ” ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ನಡೆಯಿತು.
ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಕೆ.ಪಿ.ಶೆಣೈ ಕಾರ್ಯಾಗಾರ ಉದ್ಘಾಟಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿ, ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು, ವೇದಿಕೆಯ ಉಪಾಧ್ಯಕ್ಷ ಮಂಜುನಾಥ ಪಟಗಾರ, ಕಾರ್ಯದರ್ಶಿ ಪ್ರಕಾಶ್ ನಾಯ್ಕ್ ಅತಿಥಿಗಳಾಗಿದ್ದರು.

ಪ್ರೊ. ತುಕಾರಾಮ ಪೂಜಾರಿ, ಡಾ. ಭಾಸ್ಕರ ಶೆಟ್ಟಿ ಕಾಳಾವರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಉಪನ್ಯಾಸಕ ಹಾಗೂ ವೇದಿಕೆಯ ಅಧ್ಯಕ್ಷ ಶಿವಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಜಯಶ್ರೀ ಸ್ವಾಗತಿಸಿ, ಎಂ. ಜಿ. ಅಸದಿ ವಂದಿಸಿ, ಪ್ರಕಾಶ್ ನಾಯ್ಕ್ ನಿರೂಪಿಸಿದರು. ಉಡುಪಿ ಜಿಲ್ಲೆಯ 60 ಕ್ಕೂ ಹೆಚ್ಚು ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!