Sunday, September 8, 2024

ಬೈಂದೂರು: ನಿರ್ಮಾಣಗೊಂಡು ವರ್ಷದೊಳಗೆ ಕೊಚ್ಚಿ ಹೋಯಿತು ಕಿರು ಸೇತುವೆ

ಬೈಂದೂರು: ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ನೀರೋಡಿ ಕಿರು ಸೇತುವೆಯೊಂದು ನಿರ್ಮಾಣವಾಗಿ ವರ್ಷ ಪೂರ್ಣಗೊಳ್ಳುವ ಮೊದಲೇ ಮಳೆ ನೀರಿಗೆ ಕೊಚ್ಚಿ ಹೋದ ಘಟನೆ ನಡೆದಿದೆ.

ತಗ್ಗರ್ಸೆ ಗ್ರಾಮದ ನೀರೋಡಿ ಎಂಬ ಗ್ರಾಮೀಣ ಪ್ರದೇಶಕ್ಕೆ ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ಕಿರು ಸೇತುವೆ ನಿರ್ಮಿಸಲಾಗಿತ್ತು. ಈ ಮಳೆಗೇ ಈ ಕಿರು ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ಶಾಲಾ ವಿದ್ಯಾರ್ಥಿಗಳಿಗೆ ರೈತರಿಗೆ ಕೂಲಿ ಕಾರ್ಮಿಕರಿಗೆ ಈ ರಸ್ತೆಯೇ ಅವರ ಮಾರ್ಗ ದಾರಿ ಒಂದು ಊರಿನಿಂದ ಇನ್ನೊಂದು ಊರಿಗೆ ಹೋಗುವ ಸೇತುವೆ ಇದಾಗಿದ್ದು, ಈಗ ಜನಸಾಮಾನ್ಯರಿಗೆ ಸಂಪರ್ಕ ಮಾರ್ಗವಿಲ್ಲದೆ ಅಸಹಾಯಕರಾಗಿದ್ದಾರೆ. ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕಿರುಸೇತುವೆ ಕನಿಷ್ಠ ಒಂದು ವರ್ಷವೂ ಬಾಳಿಕೆ ಬಾರದಿರುವ ಬಗ್ಗೆ ಕಳಪೆ ಕಾಮಗಾರಿಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!