Sunday, September 8, 2024

ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ


ಕುಂದಾಪುರ: ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.
ಆ.19 ರಂದು ಮಂಗಳೂರಿನಲ್ಲಿ ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ಶರ್ಮ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ನಿರ್ದೇಶಕರಾದ ಎಸ್.ರಾಜು ಪೂಜಾರಿ, ಎಂ. ಮಹೇಶ ಹೆಗ್ಡೆ, ಬಿ.ನಿರಂಜನ್, ಟಿ.ಜಿ.ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ ಎಂ,. ಜೈರಾಜ್ ಬಿ. ರೈ, ಬಿ.ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!