Sunday, September 8, 2024

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ‘ಎ ವರ್ಗದ ಆಡಿಟ್ ವರ್ಗೀಕರಣ ಪ್ರಶಸ್ತಿ’


ಕುಂದಾಪುರ: ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2022-23ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎ ವರ್ಗದ ಆಡಿಟ್ ವರ್ಗೀಕರಣ ಪ್ರಶಸ್ತಿ ಲಭಿಸಿದೆ.

ಆ.19 ರಂದು ಮಂಗಳೂರಿನಲ್ಲಿ ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸಹಕಾರಿ ಸೌಧದಲ್ಲಿ ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಮ್. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ವಿಕಾಸ್ ಹೆಗ್ಡೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಬಿತಾ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ, ಗೋಪಾಲ ಶೆಟ್ಟಿಗಾರ್, ಗುಣಾಕರ ಶೆಟ್ಟಿ, ಜಯ ಖಾರ್ವಿ, ಸೀಮಾ ಮೊಗವೀರ, ಆಂತರಿಕ ಲೆಕ್ಕ ಪರಿಶೋಧಕರಾದ ಅಣ್ಣಪ್ಪ ಬಿಲ್ಲವ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ನಿರ್ದೇಶಕರಾದ ಎಸ್.ರಾಜು ಪೂಜಾರಿ, ಎಂ. ಮಹೇಶ ಹೆಗ್ಡೆ, ಬಿ.ನಿರಂಜನ್, ಟಿ.ಜಿ.ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ ಎಂ,. ಜೈರಾಜ್ ಬಿ. ರೈ, ಬಿ.ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!