Sunday, September 8, 2024

ಮೂಡುಬಗೆ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಸಾಧನೆ


ಕುಂದಾಪುರ: ಮಹಾತ್ಮಾಗಾಂಧಿ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಆಗಸ್ಟ್ 27ರಿಂದ 29 ತನಕ ಶ್ರವಣದೋಷವುಳ್ಳವರ ಅಸೋಸಿಯೇಶನ್ ಆಯೋಜನೆಯಲ್ಲಿ ನಡೆದ 13ನೇ ಕರ್ನಾಟಕ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

14 ವಯೋಮಾನದ ಕೀಡಾಕೂಟದಲ್ಲಿ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯ ಕ್ರೀಡಾಪಟುಗಳಾದ ಶ್ರದ್ದಾ 100 ಮೀಟರ್ ಓಟದಲ್ಲಿ ದ್ವಿತೀಯ, ಗುಂಡು ಎಸೆತದಲ್ಲಿ ಪ್ರಥಮ, ಶ್ರೀನಿಕೇತ್ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅನಿರುದ್ಧ್ ಉದ್ದ ಜಿಗಿತದಲ್ಲಿ ತೃತೀಯ, ಮಾಝ್ 600 ಮೀಟರ್ ಓಟದಲ್ಲಿ ತೃತೀಯ ಹಾಗೂ ಚೈತ್ರ 600 ಮೀಟರ್ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!