Sunday, September 8, 2024

ಗಣೇಶ ಚತುರ್ಥಿ: ಉಡುಪಿ ಜಿಲ್ಲೆಯಲ್ಲಿ ಸೆ.19ರಂದು ಸರ್ಕಾರಿ ರಜೆ


ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಉಡುಪಿ ಜಿಲ್ಲೆಯಲ್ಲಿ ಸೆ.18ರ ಬದಲಾಗಿ ಸೆ.19 ರಂದು ಸಾರ್ವತ್ರಿಕ ಸರ್ಕಾರಿ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರ ಈ ಮೊದಲು ಸೆ.18ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಪ್ರಕಟಿಸಲಾಗಿತ್ತು.

ಕರಾವಳಿ ಜಿಲ್ಲೆಯಲ್ಲಿ ಸೆ.19ರಂದು ಹೆಚ್ಚಾಗಿ ಗಣೇಶ ಚತುರ್ಥಿ ಆಚರಣೆ ಇರುವುದರಿಂದ ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18ರ ಬದಲಿಗೆ ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸರಕಾರದ ಕಾರ್ಯದರ್ಶಿಗಳು ಉಡುಪಿ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!