Sunday, September 8, 2024

ಸಾಹಿತಿ ವೈದೇಹಿ ಅವರಿಗೆ ಕಾರ್ಕಡ ‘ಗೆಳೆಯರ ಬಳಗ-ಕಾರಂತ ಪುರಸ್ಕಾರ-2023’

ಕೋಟ: ಗೆಳೆಯರ ಬಳಗ (ರಿ.) ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ಗೆಳೆಯರ ಬಳಗ-ಕಾರಂತ ಪುರಸ್ಕಾರ-2023ಕ್ಕೆ ಈ ಬಾರಿ ಕಾರಂತರ ಒಡನಾಡಿ, ಖ್ಯಾತ ಸಾಹಿತಿ, ನಾಡು ನುಡಿ ಏಳಿಗೆಗಾಗಿ ಅನನ್ಯವಾಗಿ ತೊಡಗಿಸಿಕೊಂಡಿರುವ ಶ್ರೀಮತಿ ವೈದೇಹಿ ಭಾಜನರಾಗಿದ್ದಾರೆ.

ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ. ಗೆಳೆಯರ ಬಳಗ ಕಾರಂತ ಪುರಸ್ಕಾರ-2023 ನ್ನು ಅಕ್ಟೋಬರ್ ತಿಂಗಳ 14ರ ಶನಿವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!