Sunday, September 8, 2024

ಕಬಡ್ಡಿ ಪಂದ್ಯಾಟ: ಜಿಲ್ಲಾ ತಂಡಕ್ಕೆ ವಂಡ್ಸೆ ಶಾಲಾ ವಿದ್ಯಾರ್ಥಿನಿಯರು ಆಯ್ಕೆ


ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಹದಿನಾಲ್ಕರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ.ಹಿ.ಪ್ರಾ. ಶಾಲೆ ವಂಡ್ಸೆ ಇಲ್ಲಿಯ ವಿದ್ಯಾರ್ಥಿನಿಯರ ತಂಡ ದ್ವಿತೀಯ ಪ್ರಶಸ್ತಿ ವಿಜೇತರಾಗಿದ್ದಾರೆ.

ತಂಡದ ನಾಯಕಿ ಶರಣ್ಯ ಅತ್ಯುತ್ತಮ ರೈಡರ್ ಪ್ರಶಸ್ತಿ ಪಡೆದಿದ್ದಾಳೆ.

ಶರಣ್ಯ, ಮಾನ್ವಿತಾ, ಶಿರೀಶ ಮತ್ತು ಶ್ರದ್ಧಾ ಈ ನಾಲ್ವರು ವಿದ್ಯಾರ್ಥಿಗಳು ಉಡುಪಿ ಜಿಲ್ಲಾ ತಂಡಕ್ಕೆ ಆಯ್ಕೆಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ಹದಿನಾಲ್ಕರ ವಯೋಮಿತಿಯ ಕಬಡ್ಡಿ ಪಂದ್ಯಾವಳಿಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಶಾಲಾ ದೈಹಿಕ ಶಿಕ್ಷಕರಾದ ರಾಜು ಎನ್ ಈ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಮತ್ತು ಟ್ರಸ್ಟಿನ ಸದಸ್ಯರು, ಎಸ್.ಡಿ.ಎಂ.ಸಿ, ಶಿಕ್ಷಕರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!