Sunday, September 8, 2024

ಕಾವೇರಿ ವಿವಾದ, ಕರ್ನಾಟಕ ಬಂದ್‌ : ಕರ್ನಾಟಕವಿರುವುದು ರೋಡ್ ಶೋ ಮಾಡಲು ಮಾತ್ರ ಎಂದು ತಿಳಿದಿದ್ದಾರಾ ಮೋದಿ ? : ಕಾಂಗ್ರೆಸ್‌ ವ್ಯಂಗ್ಯ

ಜನಪ್ರತಿನಿಧಿ ವಾರ್ತೆ :  ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಇಂದು(ಸೆ.29) ರಾಜ್ಯದಾದ್ಯಂತ ʼಕರ್ನಾಟಕ ಬಂದ್‌ʼ ಪ್ರತಿಭಟನೆ ನಡೆಯುತ್ತಿದೆ. ಬಂದ್‌ಗೆ ರಾಜ್ಯ ಸರ್ಕಾರ ನಿರ್ಬಂದ ಹೇರಿದ್ದರೂ ಕೂಡ ಬೆಂಗಳೂರು, ರಾಮನಗರ, ಮಂಡ್ಯ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಬಂದ್‌ ಕಾವು ಜೋರಾಗಿದೆ. ಕೆಲವುಕಡೆ ಅಹಿತಕರ ಘಟನೆಯೂ ನಡೆದ ವರದಿಯೂ ಆಗಿದೆ. ಈ ನಡುವೆ ರಾಜ್ಯ ಸರ್ಕಾರ ಕೇಂದ್ರ ಬಿಜೆಪಿ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದೆ.

ಸಾಮಾಜಿಕ ಜಾಲತಾಣ ʼಎಕ್ಸ್‌ʼನಲ್ಲಿ ತನ್ನ ಅಧಿಕೃತ ಖಾತೆಯ ಮೂಲಕ ಕಿಡಿ ಕಾರಿದ ಕಾಂಗ್ರೆಸ್‌, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿದ ಅನ್ಯಾಯ ಒಂದೆರಡಲ್ಲ. ನೆರೆ ಪರಿಹಾರದಲ್ಲೂ ಅನ್ಯಾಯ, ಬರ ಪರಿಹಾರದಲ್ಲೂ ಅನ್ಯಾಯ, GST ಹಂಚಿಕೆಯಲ್ಲೂ ಅನ್ಯಾಯ, ಕೇಂದ್ರದ ಯೋಜನೆಗಳ ಅನುದಾನದಲ್ಲೂ ಅನ್ಯಾಯ, ಈಗ ಕಾವೇರಿ ವಿಚಾರದಲ್ಲೂ ಅನ್ಯಾಯ ಎಂದು ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಾಡಿದ ಅನ್ಯಾಯವನ್ನು ಬಿಚ್ಚಿಟ್ಟಿದೆ.

ಇನ್ನು, ರಾಜ್ಯ ಬಿಜೆಪಿ ಸಂಸದರನ್ನು ಕುಟುಕಿದ ಕಾಂಗ್ರೆಸ್‌,  ಈ ಎಲ್ಲಾ ಅನ್ಯಾಯಕ್ಕೂ ಕರ್ನಾಟಕದ ಬಿಜೆಪಿ ಸಂಸದರದ್ದು “ಮೌನ“ ಮಾತ್ರ ಎಂದು ಹೇಳಿದ್ದಲ್ಲದೇ, ಕರ್ನಾಟಕ ಇರುವುದು ಚುನಾವಣಾ ರೋಡ್ ಶೋ ಮಾಡಲು ಮಾತ್ರ ಎಂದು ತಿಳಿದಿದ್ದಾರಾ ಮೋದಿಯವರು? ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!