Sunday, September 8, 2024

ಕ್ರೊಡಬೈಲೂರು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕುಂದಾಪುರ: ಗೆಳೆಯರ ಬಳಗ ಕ್ರೊಡಬೈಲೂರು ರಿ., ಹಾಗೂ ಇಂಡಿಯನ್ ರೆಡ್‌ಕ್ರಾಸ್ ಸಂಸ್ಥೆ ಇವರ ಸಹಯೋಗದಲ್ಲಿ ಕೀರ್ತಿಶೇಷ ಹದ್ದೂರು ರಾಜೀವ ಶೆಟ್ಟಿ ಹಾಗೂ ಮಂಜುನಾಥ್ ಶೆಟ್ಟಿ ಮಶ್ಯಾಡಿ ಇವರ ಸ್ಮರಣಾರ್ಥವಾಗಿ ಕ್ರೋಡಬೈಲೂರು ಶಾಲಾ ವಠಾರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಅ.1ರಂದು ನೆಡೆಯಿತು.

ಶಂಕರನಾರಾಯಣ ಗ್ರಾಮ ಪಂಚಾಯತಿ ಅಧ್ಯಕ್ಷ ಉಮೇಶ್ ಶೆಟ್ಟಿ ಕಲ್ಗದ್ದೆ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮಮತಾ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕ್ರೋಡಬೈಲೂರು ಶಾಲೆಯಲ್ಲಿ ಸೇವೆ ಸಲ್ಲಿಸಿ ಬಳ್ಕೂರು ಶಾಲೆಗೆ ವರ್ಗಾವಣೆಗೊಂಡ ಸಂತೋಷ್ ಜಿಗಾರು ಹಾಗೂ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡ ನಾರಾಯಣ ಅಡಿಗ ಅವರನ್ನು ಸನ್ಮಾನಿಸಲಾಯಿತು.

ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಸಭಾಪತಿ ಜಯಕರ ಶೆಟ್ಟಿ, ಡಾ.ಸಚ್ಚಿದಾನಂದ, ರಚನ ಕ್ರೋಡಬೈಲೂರು ಇದರ ಅಧ್ಯಕ್ಷ ಆನಂದ ಮೊಗವೀರ, ಸ್ಥಳೀಯ ಶಾಲಾ ಮುಖ್ಯೋಪಾಧ್ಯಾಯಿನಿ ಗಿರಿಜಾ ಡಿ.ಕೆ ಉಪಸ್ಥಿತರಿದ್ದರು.
ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!